ಗಂಗೊಳ್ಳಿಯಲ್ಲಿ ಸಂಭ್ರಮದಿಂದ ಹೋಳಿ ಹಬ್ಬ ಆಚರಣೆ

ಕುಂದಾಪುರ:ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ಕೊಂಕಣಿ ಖಾರ್ವಿ ಸಮಾಜ ಬಾಂಧವರು ಸಂಭ್ರಮದಿಂದ ಮಂಗಳವಾರ ಆಚರಿಸಿದರು.ರಂಗು ರಂಗಿನ ಬಣ್ಣಗಳನ್ನು ಒಬ್ಬರಿಂದೊಬ್ಬರಿಗೆ ಎರಚುತ್ತಾ ನೃತ್ಯ ಹಾಡುಗಾರಿಕೆಯೊಂದಿಗೆ ತಮ್ಮ ವಿನೋದವನ್ನು ವ್ಯಕ್ತಪಡಿಸುತ್ತಾ ಬಣ್ಣದೋಕುಳಿಯಲ್ಲಿ ಜನರು ಮಿಂದೆದ್ದರು.ಗಂಗೊಳ್ಳಿ ಶ್ರೀ ವಿರೇಶ್ವರ ದೇವಸ್ಥಾನದಿಂದ ಆರಂಭಗೊಂಡ ಸಂಪ್ರಾದಾಯಿಕ ಹೋಳಿ ಹಬ್ಬದ ಮೆರವಣಿಗೆ ಗಂಗೊಳ್ಳಿ ಶ್ರೀವೆಂಕರಮಣ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ಮೆರವಣಿಗೆ ಆರಂಭಕ್ಕೂ ಮುನ್ನ ಗಂಗೊಳ್ಳಿ ಬಂದರು,ಮಲ್ಯರಬೆಟ್ಟು,ದಾಕುಹಿತ್ಲು,ಗುಡ್ಡೆಕೇರಿ,ಕಂಚುಗೋಡು,ಕಂಚುಗೋಡು ಖಾರ್ವಿ ಕೇರಿ ಒಟ್ಟು ಆರು ಪಂಗಡಗಳ ಹೋಳಿ ತಂಡವು ಶ್ರೀವಿರೇಶ್ವರ ದೇವಸ್ಥಾನದಲ್ಲಿ ಒಟ್ಟುಗೂಡುತ್ತದೆ.ಹೋಳಿ ಹುಣ್ಣಿಮೆ ರಾತ್ರಿಯಂದು ಪ್ರತಿಷ್ಠಾಪಿಸಿದ ಅಡಿಕೆ ಮರಕ್ಕೆ ಪೂಜೆ ಸಲ್ಲಿಸಿದ […]

ಮಾರ್ಚ್.27 ರಂದು ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ

ಕುಂದಾಪುರ:ತಾಲೂಕಿನ ಹರ್ಕೂರು ಶ್ರೀಮಹಾಗಣಪತಿ ದೇವರ ಪುನರ್ ಪ್ರತಿಷ್ಠೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧಾವಾರ ಬೆಳಿಗ್ಗೆ 10.35ಕ್ಕೆ ನಡೆಯುವ ವೃಷಭ ಲಗ್ನ ಸುಮುಹೂರ್ತದಲ್ಲಿ ನಡೆಯಲಿದೆ.ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಅಷ್ಟಬಂಧ ಪ್ರತಿಷ್ಠಾ ಮಹೋತ್ಸವ,ಜೀವ ಕುಂಭಾಭಿಷೇಕ,ಪ್ರತಿಷ್ಠಾ ಕಲಶಾಭಿಷೇಕ,ಕಲಶಾಭಿಷೇಕ,ಮಹಾಪೂಜೆ,ಪ್ರಸಾದ ವಿತರಣೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿದೆ.ಮಾರ್ಚ್.28 ರ ಗುರುವಾರದಂದು ಬಹ್ಮಕಲಶಾಭಿಷೇಕ,ಮಹಾಪೂಜೆ,ಮಹಾಮಂಗಳಾರತಿ,ತೀರ್ಥಪ್ರಸಾದ ವಿತರಣೆ,ಮಹಾ ಅನ್ನಸಂತರ್ಪಣೆ ನಡೆಯಲಿದೆ.ಪೂರ್ವಾಹ್ನ 11 ಘಂಟೆ ಧಾರ್ಮಿಕ ಸಭಾ ಕಾರ್ಯಕ್ರಮ ಸರಳವಾಗಿ ಜರುಗಲಿದೆ.

ಶ್ರೀಸ್ವಾಮಿ ಬ್ರಹ್ಮಲಿಂಗೇಶ್ವರ ಮಹಿಳಾ ಭಜನಾ ಮಂಡಳಿ ಉದ್ಘಾಟನೆ

ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನ ಪರಿಷತ್ತ್ ಬೈಂದೂರು ತಾಲೂಕು,ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೈಂದೂರು,ಪಡುಕೋಣೆ ವಲಯ ಅವರ ಸಹಯೋಗದೊಂದಿಗೆ ಶ್ರೀಸ್ವಾಮಿ ಬ್ರಹ್ಮಲಿಂಗೇಶ್ವರ ನೂತನ ಮಹಿಳಾ ಭಜನಾ ಮಂಡಳಿ ಮಂಕಿ ಗುಜ್ಜಾಡಿ ಅದರ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಮಂಕಿಯಲ್ಲಿ ನಡೆಯಿತು.ಹಿರಿಯ ಭಜನಾ ಭಜಕರಾದ ಕೃಷ್ಣ ನಾಯ್ಕ ಉದ್ಘಾಟಿಸಿದರು.ಭಜನಾ ಪರಿಷತ್ತ್ ಅಧ್ಯಕ್ಷ ಕೃಷ್ಣ ಪೂಜಾರಿ ಶಿರೂರು ಅಧ್ಯಕ್ಷತೆ ವಹಿಸಿದ್ದರು.ಯೋಜನಾಧಿಕಾರಿ ವಿನಾಯಕ ಪೈ,ತಾಲೂಕು ವಲಯ ಸಂಯೋಜಕರಾದ ಮಂಜುನಾಥ್ ಊಳ್ಳೂರು,ಮಂಜು ಪೂಜಾರಿ ಗೋಳಿಹೊಳೆ,ಬಾಬು ದೇವಾಡಿಗ ಉಪ್ಪÅಂದ,ಪೂರ್ಣಿಮಾ ಕೊಲ್ಲೂರು ಉಪಸ್ಥಿತರಿದ್ದರು.ಮಂಜುನಾಥ ಹೊಸಾಡು […]

You cannot copy content of this page