ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನ,ಬೆಳ್ಳಿ ಪ್ರಭಾವಳಿ ಮೆರಣಿಗೆ

ಕುಂದಾಪುರ:ತಾಲೂಕಿನ ಹರ್ಕೂರು ಗ್ರಾಮದ ಶ್ರೀಮಹಾಗಣಪತಿ ದೇವಸ್ಥಾನದ ತಾಮ್ರದ ಹೊದಿಕೆಯ ನೂತನ ಶಿಲಾದೇಗುಲ ಸಮರ್ಪಣೆ,ಬ್ರಹ್ಮಕಲಶೋತ್ಸವ ಹಾಗೂ ಶ್ರೀದೇವರ ಪುನರ್ ಪ್ರತಿಷ್ಠೆ ಅಂಗವಾಗಿ ಶ್ರೀಗಣಪತಿ ದೇವರಿಗೆ ಸಮರ್ಪಣೆ ಮಾಡಲಿರುವ ಬೆಳ್ಳಿ ಕಿರೀಟ ಮತ್ತು ಬೆಳ್ಳಿ ಪ್ರಭಾವಳಿಯನ್ನು ಚಂಡೆವಾದನ,ಪೂರ್ಣಕುಂಭ ಸ್ವಾಗತದೊಂದಿಗೆ ಭವ್ಯ ಮೆರವಣಿಗೆ ಮೂಲಕ ಸೋಮವಾರ ಬರಮಾಡಿಕೊಳ್ಳಲಾಯಿತು.ಹರ್ಕೂರು ಶ್ರೀಚಾಮುಂಡೇಶ್ವರಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಹರ್ಕೂರು ಶ್ರೀಮಹಾಗಣಪತಿ ದೇವಸ್ಥಾನದಲ್ಲಿ ಸಮಾಪ್ತಿಗೊಂಡಿತು.ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬೆಳ್ಳಿ ಪ್ರಭಾವಳಿಗೆ ಪೂಜೆಯನ್ನು ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಸರ್ವ ಸದಸ್ಯರು,ಗ್ರಾಮಸ್ಥರು ಹಾಗೂ ಅರ್ಚಕರು […]

ಅಪಾಯಕಾರಿ ಮರ,ವಿದ್ಯುತ್ ಕಂಬ ಸ್ಥಳಾಂತರಕ್ಕೆ ಆಗ್ರಹ

ಕುಂದಾಪುರ:ತಾಲೂಕಿನ ಆಲೂರು-ಮುಳ್ಳಿಕಟ್ಟೆ ಮುಖ್ಯ ರಸ್ತೆ ಅಂಚಿನಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸಹಿತ ಮರವನ್ನು ವಾಹನ ಸವಾರರ ಸುರಕ್ಷತೆ ದೃಷ್ಟಿಯಿಂದ ಸ್ಥಳಾಂತರಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಆಲೂರು-ಮುಳ್ಳಿಕಟ್ಟೆ ಮುಖ್ಯ ರಸ್ತೆ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು ಒಂದನೆ ಹಂತದ ಕಾಮಗಾರಿ ಮುಗಿದಿದೆ.ರಸ್ತೆ ಅಭಿವೃದ್ಧಿ ಕಾರ್ಯದ ಸಂದರ್ಭದಲ್ಲಿ ರಸ್ತೆ ಅಂಚಿನಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಮತ್ತು ಮರವವನ್ನು ತೆರವುಗೊಳಿಸದೆ ಗುತ್ತಿಗೆದಾರರು ಕಾಮಗಾರಿ ಕೆಲಸವನ್ನು ನಡೆಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ.ರಸ್ತೆ ಅಂಚಿನಲ್ಲಿರುವ ಮರವನ್ನು ತೆರವು ಮಾಡದೆ ಬುಡದವರೆಗೆ ಡಾಮರು ಹಾಕಿ ಕೆಲಸವನ್ನು […]

ಹೆಮ್ಮಾಡಿ:ರೋಗ ಬಾಧೆಯಿಂದ ತೆಂಗು ಬೆಳೆ ತತ್ತರ

ಕುಂದಾಪುರ:ತಾಲೂಕಿನ ಕನ್ನಡ ಕುದ್ರು ಹಾಗೂ ಮುವತ್ತು ಮುಡಿ ಭಾಗದಲ್ಲಿ ತೆಂಗಿನ ಮರಕ್ಕೆ ತಗುಲಿದ ವಿಚಿತ್ರ ರೋಗದಿಂದ ತೆಂಗಿನ ಗರಿಗಳು ಸುಳಿ ತನಕ ಕೆಂಪಾಗಿ ಕರಟಿ ಹೋಗಿದೆ.5 ರಿಂದ 6 ಸಾವಿರಕ್ಕೂ ಅಧಿಕ ತೆಂಗಿನ ಮರಗಳು ರೋಗ ಬಾಧೆಯಿಂದ ತತ್ತರಿಸಿದ್ದು ರೈತರು ಆತಂಕಿತರಾಗಿದ್ದಾರೆ.ತೆಂಗಿನ ಮರಕ್ಕೆ ಅಂಟಿಕೊಂಡಿದ್ದ ರೋಗ ಬಾಧೆಯನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳ ಬೇಕೆಂದು ರೈತರು ಆಗ್ರಹಿಸಿದ್ದಾರೆ.ಹಸಿರಿನಿಂದ ಕಂಗೊಳಿಸುತ್ತಿದ್ದ ತೆಂಗಿನ ಮರದ ಗರಿಗಳು ಇದ್ದಕ್ಕಿದಂತೆ ಸುಳಿ ತನಕ ಕೆಂಪಾಗಿ ಕರಟಿ ಒಣಗಿ ಜೊತು ಬೀಳುತ್ತಿದೆ.ತೆಂಗಿನ ಮರದಲ್ಲಿ ಹಸಿರಿನ […]

You cannot copy content of this page