ಹಟ್ಟಿಯಂಗಡಿ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ನೂತನ ದೇವಾಲಯ ಲೋಕಾರ್ಪಣೆ
ಕುಂದಾಪುರ:ಉಡುಪಿ ಜಿಲ್ಲೆಯ ಪ್ರಸಿದ್ಧ ಕುಂದಾಪುರ ತಾಲೂಕಿನ ಶ್ರೀ ಸಿದ್ಧಿವಿನಾಯಕ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ, ಬ್ರಹ್ಮಕಲಶೋತ್ಸವ ಕಾರ್ಯಕ್ರಮ ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರರಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳ ಫರ್ಮಾನುಗ್ರಹದಿಂದ ತತ್ಕರಕಮಲಸಂಜಾತರಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳ ನೇತೃತ್ವದಲ್ಲಿ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ನಡೆಯಿತು.ಮಹಾ ಅನ್ನಸಂತರ್ಪಣೆ, ಶ್ರೀದೇವರ ಬೆಳ್ಳಿರಥ ಸಮರ್ಪಣೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಜರುಗಿತು. ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮಿಗಳವರು ಆಶೀರ್ವಚನ ನೀಡಿ […]



























































































































































































































































































































































































































































































































































































































































































































































































































































































































































































































































































































































































































































































































































































































































































