ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ,ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮ ಯು.ರಾಜೇಶ ಕಾರಂತ್ ಉಪ್ಪಿನಕುದ್ರು ಅವರ ಸಾರಧ್ಯದಲ್ಲಿ ಸೋಮವಾರ ಮಂಕಿ ಶಾಲೆಯಲ್ಲಿನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ತನ್ನ ತಾಯಿ ಕಲಿತ ಶಾಲೆಯನ್ನು ನೆನೆದು ದತ್ತು ಸ್ವೀಕಾರ ಮಾಡಿರುವುದು ಶ್ಲಾಘನೀಯ ಕೆಲಸವಾಗಿದೆ.ದಾನಿಗಳ ಸಹಕಾರದಿಂದ ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಗೊಳಿಸುವ ಕೆಲಸ ಮಾಡಲಾಗುತ್ತಿದ್ದು.ದಾನಿಗಳ ವಿಶಿಷ್ಟ ಕಲ್ಪನೆಯೊಂದಿಗೆ ಸರಕಾರಿ ಶಾಲೆಗಳು […]

ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ

ಕುಂದಾಪುರ:ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ,ಬ್ರಹ್ಮಕಲಶೋತ್ಸವ,ಲಕ್ಷಮೋದಕ ಹೋಮ,ಶತ ಚಂಡಿಯಾಗ,2016 ಕಾಯಿ ಗಣಹೋಮ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಾರ್ಚ್ 13 ರಿಂದ ಮಾರ್ಚ್ 17 ರ ತನಕ ನಡೆಯಲಿದೆ. ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಹಟ್ಟಿಯಂಗಡಿ ಧರ್ಮದರ್ಶಿಗಳಾದ ಹೆಚ್.ಬಾಲಚಂದ್ರ ಭಟ್ಟ ಅವರು ಮಾತನಾಡಿ,ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಟ್ಟಿಯಂಗಡಿ ನೂತನ ದೇವಾಲಯ ಲೋಕಾರ್ಪಣೆ ಮತ್ತು ಬಹ್ರಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿರುವ ಧಾರ್ಮಿಕ ಕಾರ್ಯಕ್ರಮದ ಕುರಿತು ವಿವರಣೆಯನ್ನು ನೀಡಿದರು. ದಿನಾಂಕ 13 ರಂದು ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ […]

ಮರವಂತೆ:ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆ

ಕುಂದಾಪುರ:ಸಹಸ್ರಾರು ವರ್ಷಗಳ ಕಾಲದ ಇತಿಹಾಸವನ್ನು ಹೊಂದಿರುವ ಮರವಂತೆ ಶ್ರೀ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿದ್ದ ಬೆಳ್ಳಿ ರಥ ಅನಾದಿ ಕಾಲದಲ್ಲಿ ಸಮುದ್ರದಲ್ಲಿ ಹುದುಗಿದೆ ಎನ್ನುವ ವಿಷಯ ಪ್ರಶ್ನಾ ಚಿಂತನೆಯಲ್ಲಿ ಮೂಡಿ ಬಂದಿದೆ.ಆ ನಿಟ್ಟಿನಲ್ಲಿ ಶ್ರೀದೇವರಿಗೆ ಬೆಳ್ಳಿ ರಥವನ್ನು ಸಮರ್ಪಣೆ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್.ಎಂ ನಾಯಕ್ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಶ್ರೀಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಸೋಮವಾರ ಬೆಳ್ಳಿ ರಥ ಲೋಕಾರ್ಪಣೆ ಮನವಿ ಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಶ್ರೀದೇವರಿಗೆ […]

You cannot copy content of this page