ಬಾವಿಗೆ ಬಿದ್ದ ಜಿಂಕೆಮರಿ ರಕ್ಷಣೆ

ಕುಂದಾಪುರ:ಜಪ್ತಿ ಗ್ರಾಮದ ಪ್ರಭಾಕರ ಶೆಟ್ಟಿಗಾರ್ ಅವರ ಮನೆಯ ಬಾವಿಗೆ ಆಕಸ್ಮಿಕ ವಾಗಿ ಬಿದ್ದ ಜಿಂಕೆಮರಿ ಯನ್ನು ಅಗ್ನಿಶಾಮಕ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.ಬಾವಿಗೆ ಬಿದ್ದಿದ ಜಿಂಕೆಮರಿಯನ್ನು,ರಕ್ಷಿಸುವಂತೆ ಸ್ಥಳೀಯರು ಅಗ್ನಿಶಾಮಕ ಠಾಣೆಯನ್ನು ಸಂಪರ್ಕಿಸಿದ್ದರು.ಕೂಡಲೆ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಠಾಣಾಧಿಕಾರಿ ವಿ.ಸುಂದರ್ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ದಿನೇಶ್ ಹಗ್ಗದ ಸಹಾಯದಿಂದ ಬಾವಿಗೆ ಇಳಿದು ಸುರಕ್ಷಿತವಾಗಿ ಮೇಲಕ್ಕೆ ತಂದಿದ್ದಾರೆ. ಅಗ್ನಿಶಾಮಕ ದಳದ ಪ್ರದೀಪ್ ಜಿ.ನಾಯಕ್, ನವೀನ್‌ಕುಮಾರ್, ರಾಘವೇಂದ್ರ ಬೋವಿ, ಧನುಷ್ ಗೌಡ, ಅಗ್ನಿಶಾಮಕ ಚಾಲಕ ಮುಸ್ತಾಫ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಶಿರೂರು:ಬಸ್ ಹಾಗೂ ಲಾರಿ ನಡುವೆ ಅಪಘಾತ,ಇಬ್ಬರೂ ಗಂಭೀರ

ಕುಂದಾಪುರ:ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶಿರೂರು ಕರಿಕಟ್ಟೆ ಬಳಿ ಬುಧವಾರ ನಡೆದಿದೆ.ಬೈಂದೂರು ಕಡೆಯಿಂದ ಭಟ್ಕಳದ ಕಡೆಗೆ ಸಾಗುತ್ತಿದ್ದ ಸರಕಾರಿ ಬಸ್ಸಿಗೆ ಬೈಕ್ ಅಡ್ಡ ಬಂದ ಪರಿಣಾಮ ಬಸ್‌ ಚಾಲಕ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿ ಬರುತ್ತಿದ್ದ ಮೀನು ಲಾರಿ ಬಸ್ ಗೆ ಡಿಕ್ಕಿ ಹೊಡೆದಿದೆ.ಮೀನು ಲಾರಿಯಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.ಬಸ್ಸಿನ ಹಿಂಭಾಗದಲ್ಲಿದ್ದ ಒರ್ವ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ

ಕುಂದಾಪುರ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ವಲಯ,ಸರಕಾರಿ ಹಿರಿಯ ಪ್ರಾಥಮಿಕ ಮಂಕಿ ಶಾಲೆ ದತ್ತು ಸ್ವೀಕಾರ ಕಾರ್ಯಕ್ರಮ ಯು.ರಾಜೇಶ ಕಾರಂತ್ ಉಪ್ಪಿನಕುದ್ರು ಅವರ ಸಾರಧ್ಯದಲ್ಲಿ ಸೋಮವಾರ ಮಂಕಿ ಶಾಲೆಯಲ್ಲಿನಡೆಯಿತು.ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ತನ್ನ ತಾಯಿ ಕಲಿತ ಶಾಲೆಯನ್ನು ನೆನೆದು ದತ್ತು ಸ್ವೀಕಾರ ಮಾಡಿರುವುದು ಶ್ಲಾಘನೀಯ ಕೆಲಸವಾಗಿದೆ.ದಾನಿಗಳ ಸಹಕಾರದಿಂದ ಬೈಂದೂರು ಕ್ಷೇತ್ರದಲ್ಲಿ ಸರಕಾರಿ ಶಾಲೆಗಳನ್ನು ಬಲಗೊಳಿಸುವ ಕೆಲಸ ಮಾಡಲಾಗುತ್ತಿದ್ದು.ದಾನಿಗಳ ವಿಶಿಷ್ಟ ಕಲ್ಪನೆಯೊಂದಿಗೆ ಸರಕಾರಿ ಶಾಲೆಗಳು […]

You cannot copy content of this page