ಆಲೂರು ಶಾಲೆ ವಿದ್ಯಾರ್ಥಿಗಳು,ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ಸಹಕಾರದೊಂದಿಗೆ ಎಚ್‍ಸಿಎಲ್ ಫೌಂಡೇಶನ್ ವತಿಯಿಂದ ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಆಲೂರು ಶಾಲೆ ವಿದ್ಯಾರ್ಥಿಗಳಾದ ನಿತೇಶ್.ಜೆ ಮತ್ತು ನಿಧಿಶ್ರೀ ಅವರು ಟ್ರಯಥ್ಲಾನ್ (60.ಮೀ ಓಟ,ಉದ್ದ ಜಿಗಿತ,ಬಾಲ್ ಥ್ರೋ) ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.600.ಮೀ ಓಟದಲ್ಲಿ ಪ್ರಣಮ್ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ರಮೇಶ್ ಜೋಗಿಗೆ ಅವಾರ್ಡ್ ಗ್ಲೋಬಲ್ ಐಕಾನಿಕ್ ಅವಾರ್ಡ್

ಕುಂದಾಪುರ:ಥೈಲ್ಯಾಂಡ್ ಬ್ಯಾಂಕಾಕ್ ಶಿನ ವಾತ್ರ ಯೂನಿವರ್ಸಿಟಿಯಲ್ಲಿ ನಡೆದ ಇನ್ನೊವೇಷನ್ ಗ್ಲೋಬಲ್ ರಿಸರ್ಚ್ ಅಂಡ್ ಡೆವಲಪ್ಮೆಂಟ್ ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರತಿನಿಧಿಯಾಗಿ ಭಾಗವಹಿಸಿ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಉಪನ್ಯಾಸ ನೀಡಿರುವ ಹಾಗೂ ಸಾಮಾಜಿಕ ಸೇವೆಯಿಂದ ಗುರುತಿಸಿಕೊಂಡಿರುವ ರಮೇಶ್ ಹೆಚ್.ಎಸ್ ಜೋಗಿ ಅವರಿಗೆ ಗ್ಲೋಬಲ್ ಐಕಾನಿಕ್ ಅವಾರ್ಡ್ ನೀಡಿ ಗೌರವಿಸಲಾಯಿತು. ನಮ್ಮ ಅಂತರ್ಜಾಲ ದಲ್ಲಿ ಸುದ್ದಿಗಳನ್ನು ಪ್ರಕಟಿಸಲು ಸಂಪರ್ಕಿಸಿ-9916284048

ತ್ರಾಸಿ:ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮ

ಕುಂದಾಪುರ:ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಕಡೆಯಿಂದ ಎಲ್ಲಾ ರೀತಿಯ ಸಹಕಾರವನ್ನು  ನೀಡಲಾಗುವುದು ಎಂದು ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ದೇವಾಡಿಗ ಹೇಳಿದರು.ಕರ್ನಾಟಕ ಸರಕಾರ,ಜಿಲ್ಲಾ ಪಂಚಾಯತ್ ಉಡುಪಿ,ತಾಲೂಕು ಪಂಚಾಯತ್ ಕುಂದಾಪುರ,ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ತ್ರಾಸಿ ಬೀಚ್ ಗಾರ್ಡನ್‍ನಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಗ್ರಾಮಸಭೆ,ಮಕ್ಕಳ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳ ವಿಶೇಷ ಗ್ರಾಮಸಭೆಯನ್ನು ನಡೆಸಲು ತ್ರಾಸಿ ಗ್ರಾಮ ಪಂಚಾಯತ್‍ನ್ನು ಆಯ್ಕೆ ಮಾಡಿರುವುದಕ್ಕೆ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗೆ ವಂದನೆಯನ್ನು ಸಲ್ಲಿಸಿದರು. ತ್ರಾಸಿ […]

You cannot copy content of this page