ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘ ಉದ್ಘಾಟನೆ
ಕುಂದಾಪುರ:ಉಡುಪಿ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘದ ಉದ್ಘಾಟನಾ ಕಾರ್ಯಕ್ರಮ ಸಂತೆಕಟ್ಟೆ ಲಕ್ಷ್ಮೀ ನಗರದ ಗ್ರೀನ್ ಎಕ್ಸರ್ ಓಪನ್ ಗಾರ್ಡನ್ನಲ್ಲಿ ಮಂಗಳವಾರ ನಡೆಯಿತು.ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶ ವಿಠಲದಾಸ ಸ್ವಾಮೀಜಿ ದೀಪ ಪ್ರಜ್ವಲಿಸುವ ಮೂಲಕ ಜಿಲ್ಲಾ ಕ್ಯಾಟರಿಂಗ್ ಮಾಲೀಕರ ಸಂಘವನ್ನು ಉದ್ಘಾಟಿಸಿದರು.ಬಳಿಕ ಆಶೀರ್ವಚನ ನೀಡಿ,ಗುಣಮಟ್ಟ,ರುಚಿ,ಶುಚಿಯಾದ ಆಹಾರ ಪದಾರ್ಥಗಳನ್ನು ಪೂರೈಕೆ ಮಾಡುವ ಮಹತ್ತರವಾದ ಜವಾಬ್ದಾರಿ ಕ್ಯಾಟರಿಂಗ್ ಮಾಲೀಕರ ಮೇಲಿದೆ.ಈ ವೃತ್ತಿಯನ್ನು ಭಗವಂತನಿಗೆ ಕೊಡುವ ಯಜ್ಞದಂತೆ ಕಾಣಬೇಕೆಂದರು.ಅವಕಾಶ ವಂಚಿತರ ಹಸಿವು ತಣ್ಣಿಸುವುದು,ಕಣ್ಣೀರು ಒರೆಯುವ ಕೆಲಸ ನಿಜಕ್ಕೂ ಭಗವಂತನಿಗೆ ತಲುಪುತ್ತದೆ. ಈ ನಿಟ್ಟಿನಲ್ಲಿ […]





























































































































































































































































































































































































































































































































































































































































































































































































































































































































































































































































































































































































































































































































































































































































































