ಸುವರ್ಣ ಸಂಭ್ರಮ,ಸೀತಾರಾಮ ಕಲ್ಯಾಣೋತ್ಸವ ಪೂರ್ವಭಾವಿ ಸಭೆ

ಕುಂದಾಪುರ:ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಸಂಭ್ರಮ ಹಾಗೂ ಸೀತಾರಾಮ ಕಲ್ಯಾಣೋತ್ಸವ ಅಂಗವಾಗಿ ಪೂರ್ವಭಾವಿ ಸಭೆ ದೇವಸ್ಥಾನದ ವಠಾರದಲ್ಲಿ ಮಂಗಳವಾರ ನಡೆಯಿತು.ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಕುರಿತು ವೇ.ಮೂರ್ತಿ ಚೆನ್ನಕೇಶವ ಗಾಯಿತ್ರಿ ಭಟ್ ಆನಗಳ್ಳಿ ಅವರ ನೇತೃತ್ವದಲ್ಲಿ ಜಾಗದ ಪರಿಶೀಲನೆ ಮಾಡಲಾಯಿತು.ಶ್ರೀರಾಮ ತಾರಕ ಜಪಾ ಹೋಮ ಮಾಡುವುದರ ಕುರಿತು ಹೋಮದ ಕುಂಡವನ್ನು ಅರ್ಚಕರ ಉಪಸ್ಥಿತಿಯಲ್ಲಿ ರಚಿಸಲಾಯಿತು.ಮಹಿಳಾ ಸಮಿತಿ ಯಿಂದ ಸಭೆ ಜರುಗಿತು.ವೇ.ಮೂರ್ತಿ ಚೆನ್ನಕೇಶವ ಗಾಯಿತ್ರಿ ಭಟ್ ಆನಗಳ್ಳಿ ಅವರು ಧಾರ್ಮಿಕ ಸೂಚನೆಗಳನ್ನು ವಿವರಿಸಿ ಮಾತನಾಡಿ,ದೇವರ ಪೂಜೆ ಮಾಡುವುದರಿಂದ ಮನಸ್ಸು […]

ಶ್ರೀಲಕ್ಷ್ಮೀ ಜನಾರ್ಧನ ದೇವರಿಗೆ ಕರ್ಪೂರ ಸೇವೆ ಸಮರ್ಪಣೆ

ಕುಂದಾಪುರ:ಬೈಂದೂರು ತಾಲೂಕಿನ ಬಡಾಕೆರೆ ಶ್ರೀಲಕ್ಷ್ಮೀ ಜರ್ನಾಧನ ದೇವರ ರಥೋತ್ಸವ ಅಂಗವಾಗಿ ಓಕುಳಿ ಉತ್ಸವ ಹಾಗೂ ಶ್ರೀದೇವರ ಕರ್ಪೂರ ಸೇವೆ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಭಾನುವಾರ ನಡೆಯಿತು.ಶ್ರೀಲಕ್ಷ್ಮೀ ಜನಾರ್ಧನ ದೇವರ ಸನ್ನಿಧಾನದಲ್ಲಿ ವಾರ್ಷಿಕವಾಗಿ ನಡೆಯುವ ಕರ್ಪೂರ ಸೇವೆ ಕಾರ್ಯಕ್ರಮದಲ್ಲಿ ಭಕ್ತರು ಭಾಗಿ ತಮ್ಮ ಹರಕೆಯನ್ನು ಸಲ್ಲಿಸಿದರು.ಕರ್ನಾಟಕ ರಾಜ್ಯದಲ್ಲೆ ಅತಿ ಹೆಚ್ಚು ಕರ್ಪೂರ ಸೇವೆ ಬಡಾಕೆರೆ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ನಡೆಯುತ್ತದೆ.

ಧಾರಾವಾಹಿಯಲ್ಲಿ ದೈವದ ವೇಷ ಬಳಕೆ,ದೈವಾರಾಧಕ ರಿಂದ ದೂರು ದಾಖಲು

ಮಂಗಳೂರು:ಖಾಸಗಿ ಟಿವಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ದೃಶ್ಯಾವಳಿಯನ್ನು ಬಳಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದ್ದು,ಕರಾವಳಿ ಭಾಗದ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ ಬಗ್ಗೆ ಹಾಗೂ ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.ದೈವಾರಾಧನೆ ಪ್ರದರ್ಶನ ಧಾರಾವಾಹಿಗೂ ವ್ಯಾಪಿಸಿರುವುದು ದೈವಾರಾಧಕರ ಕೆಂಗಣ್ಣಿಗೆ ಗುರಿಯಾಗಿದೆ. ಧಾರಾವಾಹಿಯಲ್ಲಿ […]

You cannot copy content of this page