ಬಂಜರು ಭೂಮಿಗೆ ಜೀವ ತುಂಬುತ್ತಿರುವ ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಕಿರಿಮಂಜೇಶ್ವರ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಿವಾಸಿಯಾಗಿರುವ ಸುಬ್ಬಣ್ಣ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಿಕೊಳ್ಳುವುದರ ಮೂಲಕ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ.ತನ್ನ 17ನೇ ವಯಸ್ಸಿನಲ್ಲಿಯೇ ತಂದೆಯವರ ಜೊತೆ ಗದ್ದೆ ಕೆಲಸದಲ್ಲಿ ತೊಡಗಿಕೊಂಡಿರುವ ಅವರು ಕೃಷಿ ಕಾಯಕವನ್ನೆ ತನ್ನ ಮೂಲ ಉದ್ಯೋಗವನ್ನಾಗಿ ಮಾಡಿಕೊಂಡು ಕುಟುಂಬದ ಜತೆ ಸಂತೃಪ್ತಿಯಾದ ಜೀವನವನ್ನು ನಡೆಸುತ್ತಿದ್ದಾರೆ.ಕೃಷಿಯಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಸುಬ್ಬಣ್ಣ ಶೆಟ್ಟಿ ಅವರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ನಿಸ್ಸಿಮ್ಮರು. ಹಡವು ಬಿದ್ದ ಭೂಮಿಗೆ ಚೈತನ್ಯ ನೀಡುವ ದೃಷ್ಟಿಯಿಂದ […]

ಹಾಟ್ ನಟಿ ಪೂನಂ ಪಾಂಡೆ ಕ್ಯಾನ್ಸರ್ ನಿಂದ ನಿಧನ

ಮುಂಬೈ (ಫೆ.2):ಹಾಟ್‌ ನಟಿ ಎಂದೇ ಹೆಸರುವಾಸಿಯಾಗಿರುವ ಪೂನಂ ಪಾಂಡೆ ಅವರು ಕ್ಯಾನ್ಸರ್‌ನಿಂದ ತಮ್ಮ 32ನೇ ವಯಸ್ಸಿನಲ್ಲೇ ಸಾವನನ್ನಪ್ಪಿದ್ದಾರೆ.ಅವರ ಮ್ಯಾನೇಜರ್‌ ಈ ಸುದ್ದಿಯನ್ನು ಖಚಿತಪಡಿಸಿದ್ದಾರೆ‌ ಎಂದು ಬಲ್ಲ ಮೂಲಗಳು ತಿಳಿಸಿವೆ.ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌ ಮಾಡಿದ್ದಾರೆ.ಅಧಿಕೃತ ಇನ್ಸ್‌ಟಾಗ್ರಾಮ್‌ ಪೇಜ್‌ನಲ್ಲಿ ಬರೆದುಕೊಂಡಿರುವ ಟೀಮ್‌, ‘ಇಂದಿನ ಬೆಳಗ್ಗೆ ನಮಗೆಲ್ಲರಿಗೂ ಕಠಿಣ ದಿನವಾಗಿತ್ತು. ಗರ್ಭಕಂಠದ ಕ್ಯಾನ್ಸರ್‌ನ ಕಾರಣದಿಂದಾಗಿ ಇಂದು ನಾವು ಪೂನಮ್‌ ಅವರನ್ನು ಕಳೆದುಕೊಂಡಿದ್ದೇವೆ ಎಂದು ತಿಳಿಸಲು ದುಃಖವಾಗುತ್ತಿದೆ. ಆಕೆಯೊಂದಿಗೆ ಸಂಪರ್ಕಕ್ಕೆ […]

ಡೋಲು ಬಾರಿಸುವ ಮೂಲಕ ಸಂವಿಧಾನ ಜಾಥಾ ಉದ್ಘಾಟಿಸಿದ ಶಾಸಕರು

ಬೈಂದೂರು:ಸಂವಿಧಾನದ ಮಹತ್ವವನ್ನು ಅರಿತುಕೊಂಡಾಗ ಮಾತ್ರ ಮೇಲು ಕೀಳು ಎಂಬ ಭೇದ ಭಾವವನ್ನು ಹೋಗಲಾಡಿಸಲು ಸಾಧ್ಯವಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಬೈಂದೂರು ತಾಲೂಕಿನ ಮರವಂತೆ ಗ್ರಾಮ ಪಂಚಾಯತ್‍ನಲ್ಲಿ ನಡೆದ ಸಂವಿಧಾನ ಜಾಥಾ ಕಾರ್ಯಕ್ರಮಕ್ಕೆ ಡೋಲು ಬಾರಿಸುವುದರ ಮುಖೇನ ಉದ್ಘಾಟಿಸಿ ಮಾತನಾಡಿದರು.ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ ಮತ್ತು ಸದಸ್ಯರು,ಬೈಂದೂರು ತಾಲೂಕು ಇಒ ಭಾರತಿ ಮತ್ತು ತಹಶೀಲ್ದಾರ್,ಆಶಾ ಮತ್ತು ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತೆಯರು,ಗ್ರಾಮಸ್ಥರು,ವಿದ್ಯಾರ್ಥಿಗಳು,ಶಿಕ್ಷಕರು ಉಪಸ್ಥಿತರಿದ್ದರು.ಅಂಬೇಡ್ಕರ್ ಮತ್ತು ಗಾಂಧಿ ಪುತ್ಥಳಿಗೆ ಪೂಷ್ಪಾರ್ಚನೆ ಸಲ್ಲಿಸಲಾಯಿತು.

You cannot copy content of this page