ಆರಾಧ್ಯ ಖಾರ್ವಿಗೆ ದ್ವಿತೀಯ ಸ್ಥಾನ

ಕುಂದಾಪುರ:ಜ.28 ರಂದು ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಗಂಗೊಳ್ಳಿ ಸೆಂಟರ್ ನ ಅರಾಧ್ಯ ಖಾರ್ವಿ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ. ಇವರು ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ನಾಲ್ಕನೇ ತರಗತಿ ವಿದ್ಯಾರ್ಥಿ. ನಾಗರಾಜ್ ಖಾರ್ವಿ ಮತ್ತು ದೀಪಾ ಖಾರ್ವಿ ದಂಪತಿಗಳ ಪುತ್ರಿ .ಸಂಸ್ಥೆಯ ಶಿಕ್ಷಕರಾದ ಪ್ರಸನ್ನ ಕೆ. ಬಿ ಮತ್ತು ಸುನಿತಾ ಇವರು ತರಬೇತಿಯನ್ನು ನೀಡಿರುತ್ತಾರೆ.

ವಿನಿಶ್ ಕುಮಾರ್ ಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ 4ನೇ ತರಗತಿ ವಿದ್ಯಾರ್ಥಿ ವಿನಿಶ್ ಕುಮಾರ್ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.ಕಾವ್ರಾಡಿಯ ವಿಜಯ್ ಕುಮಾರ್ ಮತ್ತು ಶಿಕ್ಷಕಿ ಅನುಷಾ ಸಿ.ಬಂಗೇರ ದಂಪತಿಯ ಪುತ್ರ, ಪ್ರಸನ್ನ ಕೆ.ಬಿ,ಸುನೀತಾ ಹಾಗೂ ಮಹಾಲಕ್ಷ್ಮೀ ಅವರು ತರಬೇತಿಯನ್ನು ನೀಡಿದ್ದರು.

ಬಂಜರು ಭೂಮಿಗೆ ಜೀವ ತುಂಬುತ್ತಿರುವ ಪ್ರಗತಿಪರ ಕೃಷಿಕ ಸುಬ್ಬಣ್ಣ ಶೆಟ್ಟಿ ಕಿರಿಮಂಜೇಶ್ವರ

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ನಿವಾಸಿಯಾಗಿರುವ ಸುಬ್ಬಣ್ಣ ಶೆಟ್ಟಿ ಅವರು ಕಳೆದ 35 ವರ್ಷಗಳಿಂದ ಕೃಷಿ ಚಟುವಟಿಕೆ ಕಾರ್ಯದಲ್ಲಿ ತೊಡಗಿಕೊಳ್ಳುವುದರ ಮೂಲಕ ಪ್ರಗತಿಪರ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ.ತನ್ನ 17ನೇ ವಯಸ್ಸಿನಲ್ಲಿಯೇ ತಂದೆಯವರ ಜೊತೆ ಗದ್ದೆ ಕೆಲಸದಲ್ಲಿ ತೊಡಗಿಕೊಂಡಿರುವ ಅವರು ಕೃಷಿ ಕಾಯಕವನ್ನೆ ತನ್ನ ಮೂಲ ಉದ್ಯೋಗವನ್ನಾಗಿ ಮಾಡಿಕೊಂಡು ಕುಟುಂಬದ ಜತೆ ಸಂತೃಪ್ತಿಯಾದ ಜೀವನವನ್ನು ನಡೆಸುತ್ತಿದ್ದಾರೆ.ಕೃಷಿಯಲ್ಲಿ ಅಗಾಧವಾದ ಜ್ಞಾನವನ್ನು ಹೊಂದಿರುವ ಸುಬ್ಬಣ್ಣ ಶೆಟ್ಟಿ ಅವರು ಆಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಲ್ಲಿ ನಿಸ್ಸಿಮ್ಮರು. ಹಡವು ಬಿದ್ದ ಭೂಮಿಗೆ ಚೈತನ್ಯ ನೀಡುವ ದೃಷ್ಟಿಯಿಂದ […]

You cannot copy content of this page