ಶ್ರೀರಾಮೋತ್ಸವ,ಶ್ರೀರಾಮ ವೇಷ ಸ್ಪರ್ಧೆ

ಕುಂದಾಪುರ:ಅಯೋಧ್ಯೆ ಶ್ರೀರಾಮ ದೇವರ ಪ್ರತಿಷ್ಠೆ ಅಂಗವಾಗಿ ಹೊಸಾಡು ಗ್ರಾಮದ ಅರಾಟೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣು ಕಾಯಿ,ಹೋಮ,ಭಜನೆ,ಅನ್ನದಾನ ಸೇವೆ ಕಾರ್ಯಕ್ರಮ ಸೋಮವಾರ ನಡೆಯಿತು.ದೀಪಗಳನ್ನು ಬೆಳಗಿಸಿ ಆರಾಧಿಸಲಾಯಿತು.ಪುಟಾಣಿ ಮಕ್ಕಳು ಶ್ರೀರಾಮ ದೇವರ ವೇಷ ಧರಿಸಿ ಸಂಭ್ರಮಸಿದರು.ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಭಜನೆ ಪುಸ್ತಕ ನೀಡಿ ಗೌರವಿಸಲಾಯಿತು.

ಆಲೂರು:ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

ಕುಂದಾಪುರ:ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಭಾರತೀಯ ಚುನಾವಣಾ ಆಯೋಗದ ವತಿಯಿಂದ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಗ್ರೀಷ್ಮಾ ಮತ್ತು ಪ್ರಜ್ಞಾ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಶಿಕ್ಷಕ ಉದಯ ಕುಮಾರ್ ಶೆಟ್ಟಿ ತರಬೇತಿ ನೀಡಿದ್ದರು.ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯದ ಮುವತ್ತೇರಡು ಶೈಕ್ಷಣಿಕ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

ಹೊಸಾಡು:ಚುನಾವಣಾ ಬಹಿಷ್ಕಾರ ಬ್ಯಾನರ್ ಅಳವಡಿಕೆ

ಕುಂದಾಪುರ:ತಾಲೂಕಿನ ಬೈಂದೂರು ವಿಧಾನ ಸಭಾ ಕ್ಷೇತ್ರದ ಹೊಸಾಡು ಗ್ರಾಮದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭೆ ಚುನಾವಣೆಯನ್ನು ಬಹಿಷ್ಕರಿಸುವ ಹಿನ್ನೆಲೆಯಲ್ಲಿ ಬ್ಯಾನರ್ ಅಳವಡಿಕೆ ಮಾಡಿದ್ದಾರೆ.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಟೆಮಕ್ಕಿ ಕ್ರಾಸ್ ನಿಂದ ಹುಣ್ಸೆಬೆಟ್ಟಿನ ಎಸ್.ಸಿ ಕಾಲೋನಿಗೆ ಸಂಪರ್ಕ ಕಲ್ಪಿಸುವ ಸುಮಾರು 1 ಕಿ.ಮೀ ವರೆಗಿನ ಮಣ್ಣಿನ ರಸ್ತೆಯನ್ನು ಅಭಿವೃದ್ಧಿಗೊಳಿಸಬೇಕೆಂದು ಕಳೆದ 6 ವರ್ಷಗಳಿಂದ ಕಾಲೋನಿ ನಿವಾಸಿಗಳು ನೀಡಿರುವ ಹಲವು ಮನವಿಗಳಿಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಸ್ಪಂದನೆ ಮಾಡದೆ ಇದ್ದಿದ್ದರಿಂದ […]

You cannot copy content of this page