ಹೋಮ ಯಾಗದಲ್ಲಿ ಭಾಗಿಯಾದ ವಾನರ ರೂಪಿ ಹನುಮ

ಬೆಂಗಳೂರು:ಗದಗ ಜಿಲ್ಲೆ ಲಕ್ಷ್ಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ನಡೆದ ಹೋಮ ಯಾಗದಲ್ಲಿ ವಾನರ ರೂಪಿ ಹನುಮ ಭಾಗಿಯಾಗಿದ್ದಾನೆ.ರಾಮ ಪ್ರಾಣ ಪ್ರತಿಷ್ಠಾಪನೆ ದಿನದ ಅಂಗವಾಗಿ ಯಾಗ ಆಯೋಜಿಸಲಾಗಿತ್ತು.ಆ ವೇಳೆ ಪ್ರತ್ಯಕ್ಷನಾದ ಕೋತಿ ಯಾಗ ವಿಧಿಗಳನ್ನ ವೀಕ್ಷಿಸುತ್ತ ಕುಳಿತಿದೆ. ಗದಗದ ಯೋಗ ತಂಡದಿಂದ ದೇವಸ್ಥಾನದಲ್ಲಿ ಅಗ್ನಿಹೋತ್ರ ಹೋಮ ಆಯೋಜಿಸಲಾಗಿತ್ತು. ಹೋಮ ಆರಂಭವಾಗುತ್ತಿದ್ದಂತೆ ಕೋತಿ ಸ್ಥಳಕ್ಕೆ ಹಾಜರಾಗಿದೃ.ಸುತ್ತಲು ಜನ ಕೂತಿದ್ದರೂ ಯಾಗದ ಸ್ಥಳಕ್ಕೆ ದೌಡಾಯಿಸಿದ ವಾನರ ಕೆಲವು ಸಮಯದ ವರೆಗೆ ಪೂಜೆಯಲ್ಲಿ ಪಾಲ್ಗೊಂಡಿತ್ತು.

ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆ ವಾರ್ಷಿಕೋತ್ಸವ

ಕುಂದಾಪುರ:ಸರಕಾರಿ ಶಾಲೆಗಳ ಏಳಿಗೆಗೆ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾದದ್ದು ಶಾಲೆ ಮೇಲಿನ ಪ್ರೀತಿ ಹೆಚ್ಚಾದಾಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಹಳೆ ವಿದ್ಯಾರ್ಥಿಗಳ ಸಂಘ ಕೋಟೆಗುಡ್ಡೆ (ಪಡುಕೋಣೆ ಶಾಲೆ) ಸಹಕಾರದಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಡುಕೋಣೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಡಾ.ವಿಜಯಕೃಷ್ಣ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ರಾಜಕೀಯ […]

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ನವೀಕೃತ ಶಾಖೆ ಉದ್ಘಾಟನೆ

ಕುಂದಾಪುರ:ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಗಂಗೊಳ್ಳಿ ಅದರ ಕುಂದಾಪುರ ಶಾಖೆಯ ನವೀಕೃತ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ವಿದ್ಯಾರಂಗ ಮಿತ್ರ ಮಂಡಳಿ ಖಾರ್ವಿಕೇರಿ ಕುಂದಾಪುರದಲ್ಲಿ ನಡೆಯಿತು.ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರು ಉದ್ಘಾಟಿಸಿ ಶುಭಹಾರೈಸಿದರು. ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರ ಸಂಘ ಅಧ್ಯಕ್ಷ ಸದಾಶಿವ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು,ಶ್ರೀಮಹಾಕಾಳಿ ದೇವಸ್ಥಾನ ಕುಂದಾಪುರ ಅಧ್ಯಕ್ಷ ಜಯಾನಂದ ಖಾರ್ವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ,ಸಹಕಾರ ಸಂಘಗಳ ಸಹಾಯಕ ನಿಬಂಧಕರು ಕುಂದಾಪುರ ಅರುಣಕುಮಾರ್ ಎಸ್.ವಿ,ಕರಾವಳಿ ಸಾಂಪ್ರದಾಯಿಕ ನಾಡದೋಣಿ ಅಧ್ಯಕ್ಷ […]

You cannot copy content of this page