ಆರಾಧ್ಯಗೆ ಪ್ರಥಮ ಸ್ಥಾನ

ಕುಂದಾಪುರ:ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ತಮಿಳುನಾಡಿನ ಕೊಯಮುತ್ತೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಆರಾಧ್ಯ.ಆರ್ ಪ್ರಥಮ ಸ್ಥಾನವನ್ನು ಗಳಿಸಿದ್ದಾರೆ.ಗಂಗೊಳ್ಳಿ ಖಾರ್ವಿಕೇರಿ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ.ರಾಘವೇಂದ್ರ ಪೂಜಾರಿ ಅರಾಟೆ ಮತ್ತು ಶಿಕ್ಷಕಿ ಯಶೋದಾರವರ ಪುತ್ರಿ.ಪ್ರಸನ್ನ.ಕೆ.ಬಿ,ಸುನೀತಾ ಹಾಗೂ ಮಹಾಲಕ್ಷ್ಮೀ ತರಬೇತಿಯನ್ನು ನೀಡಿದ್ದಾರೆ.

ಚುನಾವಣೆ ಬಹಿಷ್ಕಾರದ ಎಚ್ಚರಿಕೆ,ಬ್ಯಾನರ್ ಅಳವಡಿಕೆ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕೇರಿಕೊಡ್ಲು ಸಂಪರ್ಕ ರಸ್ತೆ ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ ಹಾಕದಿರಲು ನಿರ್ಧರಿಸಿ ಚುನಾವಣ ಬಹಿಷ್ಕಾರದ ಬ್ಯಾನರ್ ಅಳವಡಿಕೆ ಮಾಡುವುದರ ಮುಖೇನ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರಬೈಂದೂರು ವಿಧಾನಸಭಾ ಕ್ಷೇತ್ರದ ಹೊಸಾಡು ಗ್ರಾಮದ ಕೇರಿಕೊಡ್ಲು ಭಾಗದ ನಿವಾಸಿಗಳಿಗೆ ಸುಸಜ್ಜಿತವಾದ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಹೊಂದುವುದು ಕನಸಿನ ಮಾತೆ ಎಂದು ಭಾಸವಾಗುತ್ತಿದೆ.ಕಳೆದ ಮುವತ್ತು ವರ್ಷಗಳಿಂದ ಸ್ಥಳೀಯರು ಸಲ್ಲಿಕೆ ಮಾಡುತ್ತಿರುವ ಅಹವಾಲಿಗೆ ಜನಪ್ರತಿನಿಧಿಗಳು,ಅಧಿಕಾರಿಗಳು ಒಂದು ಬಾರಿಯೂ ಸ್ಪಂದನೆ ಮಾಡಿಲ್ಲ.ಮಳೆಗಾಲದಲ್ಲಿ ಕೇಸರಿನ ರಾಡಿಯಿಂದ […]

ಫಲಾನುಭವಿಗಳಿಗೆ ಕನ್ನಡಕ ವಿತರಣೆ

ಕುಂದಾಪುರ:ಎಲ್.ಜಿ ಫೌಂಡೇಶನ್ ವತಿಯಿಂದ ಪಡುಕೋಣೆ ಶಾಲೆಯಲ್ಲಿ ಇತ್ತೀಚಿಗೆ ನಡೆದ ನೇತ್ರ ಚಿಕಿತ್ಸಾ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಫಲಾನುಭವಿಗಳಿಗೆ ಉಚಿತವಾಗಿ ಕನ್ನಡಕವನ್ನು ವಿತರಿಸಲಾಯಿತು.ಸುರೇಶ ದೇವಾಡಿಗ ಹಾಗೂ ಪಡುಕೋಣೆ ಶಾಲೆ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ ಮತ್ತು ಶ್ರೀಧರ ಹೊಸ್ಮನೆ ಉಪಸ್ಥಿತರಿದ್ದರು.

You cannot copy content of this page