ಮಾರಣಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ : ಸಂಭ್ರಮದ ಮಕರ ಸಂಕ್ರಮಣ ಉತ್ಸವ ಸಂಪನ್ನ

ಕುಂದಾಪುರ:ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇಗುಲದ ವರ್ಷಾವ ಮಕರ ಸಂಕ್ರಮಣ ಉತ್ಸವವು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನಡೆಯಿತು. ದೇಗುಲದ ಆನುವಂಶೀಯ ಆಡಳಿತ ಮೊಕ್ತೇಸರ ಸಿ. ಸದಾಶಿವ ಶೆಟ್ಟಿ ಸಂಕಲ್ಪದಲ್ಲಿ ಪಾಲ್ಗೊಂಡು ಅರ್ಚಕರ ಸಮ್ಮುಖದಲ್ಲಿ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಿದರು.ದೇವರಸನ್ನಿಧಿಯಲ್ಲಿ ವಿಶೇಷ ಪೂಜೆ ಮಹಾ ಮಂಗಳಾರತಿ ನಡೆಯಿತು.ಬುಟ್ಟಿಯಲ್ಲಿ ಸೇವಂತಿಗೆ, ಸಿಂಗಾರ ಹೂ ಸಹಿತ ಹಣ್ಣುಕಾಯಿಯೊಡನೆ ತಲೆಯ ಮೇಲೆ ಹೊತ್ತು ಶ್ರೀ ದೇವರಿಗೆ ಹರಕೆ ರೂಪದಲ್ಲಿ ಸಮರ್ಪಣೆ ಮಾಡುವ ಪದ್ಧತಿ ರೂಢಿಯಲ್ಲಿದ್ದು, ಅದಕ್ಕಾಗಿ ವಿವಿಧ ರಾಜ್ಯ ಜಿಲ್ಲೆ ತಾಲೂಕುಗಳಿಂದ ಆಗಮಿಸಿದ ಭಕ್ತರು […]

ಅರಾಟೆ:ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ಕುಂದಾಪುರ:ಬೈಂದೂರು ವಲಯದ ಸರಕಾರಿ ಕಿರಿಯ ಪ್ರಾಥಮಿಕ ಅರಾಟೆ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ ದೀಕ್ಷಾ ಯೂತ್ ಕ್ಲಬ್ ಮತ್ತು ರಿಂಗ್ ಫ್ರೆಂಡ್ಸ್ ಸಹಭಾಗಿತ್ವದಲ್ಲಿ ಸೋಮವಾರ ನಡೆಯಿತು.ಡಾ.ಉಮೇಶ್ ಪುತ್ರನ್,ಹೊಸಾಡು ಪಂಚಾಯಿತಿ ಮಾಜಿ ಅಧ್ಯಕ್ಷ ಚಂದ್ರಶೇಖರ ಪೂಜಾರಿ,ಮಂಜುನಾಥ ಅರಾಟೆ,ಎಂ.ಎಂ ಸುವರ್ಣ,ಅನಿಲ್ ಮೆಂಡನ್,ವಿಜಯ್ ಪುತ್ರನ್,ಸುಮಾ,ಮಾಲತಿ ಆಚಾರ್ಯ,ಅರುಣ್ ಆಚಾರ್ಯ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸ್ಥಳೀಯ ವಿದ್ಯಾರ್ಥಿಗಳಾದ ಆರಾಧ್ಯ.ಆರ್ ಮತ್ತು ಲಕ್ಷ ರಾಜೇಶ್ ಅವರನ್ನು ಸನ್ಮಾನಿಸಲಾಯಿತು.

ಮಾರಣಕಟ್ಟೆ ಜಾತ್ರೆ,ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ಅನ್ನದಾನ ಸೇವೆ ಸಮರ್ಪಣೆ

ಕುಂದಾಪುರ:ತಾಲೂಕಿನ ಪ್ರಸಿದ್ಧ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವರ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ ಯಿಂದ ನಡೆಯಿತು.ಕಳೆದ 11 ವರ್ಷದಿಂದ ಅನ್ನದಾನ ಸೇವೆಯನ್ನು ನಡೆಸಿಕೊಂಡು ಬರುತ್ತಿರುವ ಶ್ರೀಮತಿ ನಾಗಲಕ್ಷ್ಮಿ ಸತೀಶ್ ಕೊಠಾರಿ ಕೃಷ್ಣಿಮನೆ ನಾಯ್ಕನಕಟ್ಟೆ ಅವರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಶ್ರೀ ಬ್ರಹ್ಮಲಿಂಗೇಶ್ವರ ದೇವರಿಗೆ ಅನ್ನದಾನ ಸೇವೆಯನ್ನು ಸಮರ್ಪಿಸಿದರು.ಸಾವಿರಾರು ಮಂದಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು. ಅನ್ನ ದಾನಿಗಳಾದ ಉದ್ಯಮಿ ಸತೀಶ್ ಕೊಠಾರಿ ಅವರು ಮಾತನಾಡಿ,ವೈವಾಹಿಕ ಜೀವನದಲ್ಲಿ ಸಂತಾನ ಭಾಗ್ಯ ಇಲ್ಲದ ಸಂದರ್ಭದಲ್ಲಿ ಶ್ರೀ ಬ್ರಹ್ಮಲಿಂಗೇಶ್ವರ […]

You cannot copy content of this page