ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟದ ವಾರ್ಷಿಕ ಮಹಾಸಭೆ, ದಶಮಾನೋತ್ಸವ ಕಾರ್ಯಕ್ರಮ

ಬೈಂದೂರು:ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ಅದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ದಶಮಾನೋತ್ಸವ ಕಾರ್ಯಕ್ರಮ ಹಾಗೂ ನಾಯ್ಕನಕಟ್ಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮೀಣ ಮಳಿಗೆ ಉದ್ಘಾಟನಾ ಕಾರ್ಯಕ್ರಮ ಶ್ರೀಗೋಪಾಲಕೃಷ್ಣ ಕಲ್ಯಾಣ ಮಂಟಪ ನಾಗೂರುನಲ್ಲಿ ಭಾನುವಾರ ನಡೆಯಿತು.ರೈತ ಗೀತೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು.ಮೂಕಾಂಬಿಕಾ ಬೆಳೆಗಾರರ ಒಕ್ಕೂಟದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜೇಂದ್ರ ಸಾಧನೆಯ ವರದಿಯನ್ನು ಮಂಡಿಸಿದರು.ಒಕ್ಕೂಟಕ್ಕೆ ಅತಿ ಹೆಚ್ಚು ಪ್ರಮಾಣದಲ್ಲಿ ಭತ್ತವನ್ನು ನೀಡಿದ ಸುಬ್ಬಣ್ಣ ಶೆಟ್ಟಿ ಹಾಗೂ ರುಕ್ಮಿಣಿ,ಸಂಜು ಪೂಜಾರಿ ಮತ್ತು ಯೋಗ ಧನ್ವಿ ಮರವಂತೆ ಅವರನ್ನು,ಮಾಜಿ ನಿರ್ದೇಶಕರನ್ನು […]

ವಿಶ್ವ ಪ್ರಸಿದ್ಧ ತ್ರಾಸಿ-ಮರವಂತೆ ಬೀಚ್ ಸ್ಕೈ ಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಸವಿದ ಪ್ರವಾಸಿಗರು

ಕುಂದಾಪುರ:ಧಾರವಾಡ ಅಗ್ರಿಕಲ್ಚರ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿರುವ 1972 ರ ಬ್ಯಾಚಿನ ವಿದ್ಯಾರ್ಥಿಗಳ ತಂಡ ತಮ್ಮ ಕುಟುಂಬಿಕರೊಂದಿಗೆ ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಬೀಚ್‍ಗೆ ಶನಿವಾರ ಭೇಟಿ ನೀಡಿ ಸ್ಕೈ ಡೈನಿಂಗ್‍ನಲ್ಲಿ ಕುಳಿತು ಪ್ರಕೃತಿ ಸೌಂದರ್ಯವನ್ನು ಆಶ್ವಾಧಿಸುತ್ತಾ ಬೀಚ್‍ನಲ್ಲಿ ಮೋಜು ಮಸ್ತಿ ಮಾಡುತ್ತಾ ತಮ್ಮ ಸುಂದರ ಕ್ಷಣಗಳನ್ನು ಕಳೆದರು.ಟೀಮ್ ಮಂತ್ರಾಸ್ ಅವರಿಂದ ತ್ರಾಸಿ ಬೀಚ್‍ನಲ್ಲಿ ನಿರ್ಮಾಣವಾಗಿರುವ ಸ್ಕೈಡೈನಿಂಗ್ ರಾಜ್ಯದ ಎರಡನೇ ತಾಣವಾಗಿದೆ.ಸಮುದ್ರ ಮಟ್ಟದಿಂದ ಸುಮಾರು 90 ರಿಂದ 100 ಮೀಟರ್ ಎತ್ತರದಲ್ಲಿರುವ ಸ್ಕೈಡೈನಿಂಗ್‍ನಲ್ಲಿ ಕುಳಿತು ಬೀಚ್ ಸೌಂದರ್ಯ ಮತ್ತು […]

ಅನುಷ್ಠಾನಗೊಂಡಿರುವ ನೀರಾವರಿ ಯೋಜನೆ ಸ್ಥಳೀಯರ ಅಭಿಪ್ರಾಯದೊಂದಿಗೆ ಮುಂದುವರಿಕೆ-ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಬೈಂದೂರು:ಸುಮಾರು 72 ಕೋಟಿ.ರೂ ವೆಚ್ಚದಲ್ಲಿ ಬೈಂದೂರು ತಾಲೂಕಿನ ಕಂಬದಕೋಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಂಜಾಲು ಎಂಬಲ್ಲಿ ನಡೆಯುತ್ತಿರುವ ಹೇರಂಜಾಲು ಗುಡೇ ದೇವಸ್ಥಾನ ಏತ ನೀರಾವರಿ ಕಾಮಗಾರಿ ಪ್ರದೇಶಕ್ಕೆ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಶಾಸಕರು,ಬಹು ಚರ್ಚಿತ ಗುಡೇ ದೇವಸ್ಥಾನ ಏತ ನೀರಾವರಿ ಯೋಜನೆ ಸ್ಥಳೀಯರು ಹಾಗೂ ರೈತರ ವಿಶ್ವಾಸವನ್ನು ಪಡೆದುಕೊಂಡು ಒಂದಿಷ್ಟು ಬದಲಾವಣೆಯೊಂದಿಗೆ ಕಾಮಗಾರಿ ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು […]

You cannot copy content of this page