ಹೊಸೂರು ಪ್ರೌಢಶಾಲೆ: ಸೈಕಲ್ ಸ್ಟ್ಯಾಂಡ್,ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕುಂದಾಪುರ: ಹೊಸೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಿದ ಸೈಕಲ್ ಸ್ಟ್ಯಾಂಡ್ ಮತ್ತು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನಾ ಸಮಾರಂಭ ನಡೆಯಿತು.ಮಾಜಿ ಆಡಳಿತ ಮಂಡಳಿ ಸದಸ್ಯ ವಂಡಬಳ್ಳಿ ಜಯರಾಮ ಶೆಟ್ಟಿಯವರು ನೂತನವಾಗಿ ನಿರ್ಮಿಸಿರುವ ಸೈಕಲ್ ಸ್ಟ್ಯಾಂಡ್ ಅನ್ನು ಉದ್ಘಾಟಿಸಿದರು.ಮಾಜಿ ಆಡಳಿತ ಮಂಡಳಿ ಸದಸ್ಯ ಸಬ್ಲಾಡಿ ಮಂಜಯ್ಯ ಶೆಟ್ಟಿ ಮತ್ತು ಮಾಜಿ ಆಡಳಿತ ಮಂಡಳಿ ಸದಸ್ಯರಾದ ಡಾ.ಅತುಲ್ ಕುಮಾರ ಶೆಟ್ಟಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಶುಭಹಾರೈಸಿದರು. ರಾಜ್ಯೋತ್ಸವ ಪ್ರಶಸ್ತಿ […]

ಶ್ರೀರಾಮೋತ್ಸವ,ಶ್ರೀರಾಮ ವೇಷ ಸ್ಪರ್ಧೆ

ಕುಂದಾಪುರ:ಅಯೋಧ್ಯೆ ಶ್ರೀರಾಮ ದೇವರ ಪ್ರತಿಷ್ಠೆ ಅಂಗವಾಗಿ ಹೊಸಾಡು ಗ್ರಾಮದ ಅರಾಟೆ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ದೇವರಿಗೆ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣು ಕಾಯಿ,ಹೋಮ,ಭಜನೆ,ಅನ್ನದಾನ ಸೇವೆ ಕಾರ್ಯಕ್ರಮ ಸೋಮವಾರ ನಡೆಯಿತು.ದೀಪಗಳನ್ನು ಬೆಳಗಿಸಿ ಆರಾಧಿಸಲಾಯಿತು.ಪುಟಾಣಿ ಮಕ್ಕಳು ಶ್ರೀರಾಮ ದೇವರ ವೇಷ ಧರಿಸಿ ಸಂಭ್ರಮಸಿದರು.ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಭಜನೆ ಪುಸ್ತಕ ನೀಡಿ ಗೌರವಿಸಲಾಯಿತು.

ಆಲೂರು:ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆ

ಕುಂದಾಪುರ:ರಾಷ್ಟ್ರೀಯ ಮತದಾರ ದಿನಾಚರಣೆ ಅಂಗವಾಗಿ ಭಾರತೀಯ ಚುನಾವಣಾ ಆಯೋಗದ ವತಿಯಿಂದ ನಡೆದ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಬೈಂದೂರು ವಲಯದ ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಗ್ರೀಷ್ಮಾ ಮತ್ತು ಪ್ರಜ್ಞಾ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಶಿಕ್ಷಕ ಉದಯ ಕುಮಾರ್ ಶೆಟ್ಟಿ ತರಬೇತಿ ನೀಡಿದ್ದರು.ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯದ ಮುವತ್ತೇರಡು ಶೈಕ್ಷಣಿಕ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

You cannot copy content of this page