ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆ ವಾರ್ಷಿಕೋತ್ಸವ
ಕುಂದಾಪುರ:ಸರಕಾರಿ ಶಾಲೆಗಳ ಏಳಿಗೆಗೆ ಹಳೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರ ಪಾತ್ರ ಬಹಳ ಮುಖ್ಯವಾದದ್ದು ಶಾಲೆ ಮೇಲಿನ ಪ್ರೀತಿ ಹೆಚ್ಚಾದಾಗ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯವಾಗುತ್ತದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಹಳೆ ವಿದ್ಯಾರ್ಥಿಗಳ ಸಂಘ ಕೋಟೆಗುಡ್ಡೆ (ಪಡುಕೋಣೆ ಶಾಲೆ) ಸಹಕಾರದಿಂದ ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಪಡುಕೋಣೆ ಶಾಲೆಯಲ್ಲಿ ಶನಿವಾರ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪಡುಕೋಣೆ ಶಾಲೆಯನ್ನು ದತ್ತು ಸ್ವೀಕಾರ ಮಾಡಿರುವ ಡಾ.ವಿಜಯಕೃಷ್ಣ ಅವರು ಸಭಾಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ರಾಜಕೀಯ […]



























































































































































































































































































































































































































































































































































































































































































































































































































































































































































































































































































































































































































































































































































































































































































