ಬೈಂದೂರು ಸ್ಪೋರ್ಟ್ಸ್ ಕ್ಲಬ್,ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ

ಕುಂದಾಪುರ:ಬೈಂದೂರು ಸ್ಪೋರ್ಟ್ಸ್ ಕ್ಲಬ್ ವತಿಯಿಂದ 4ನೇ ವರ್ಷದ ರಾಜ್ಯ ಮಟ್ಟದ 40 ಗಜಗಳ ಟೆನಿಸ್ ಬಾಲ್ ಕ್ರಿಕೆಟ್ ಹಗಲು ರಾತ್ರಿ ಪಂದ್ಯಾಟ ಬೈಂದೂರು ಟ್ರೋಫಿ-2024 ಗಾಂಧಿ ಮೈದಾನದಲ್ಲಿ ಅದ್ದೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಸ್ಪೋರ್ಟ್ಸ್ ಕ್ಲಬ್ ಅವರು ಆಯೋಜಿಸಿದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಪಾಂಚಜನ್ಯ ಕೋಟೇಶ್ವರ ಪ್ರಥಮ ಸ್ಥಾನವನ್ನು ಪಡೆಯಿತು,ಶೆಟ್ಟಿ ಎಂಪಿಯರ್ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ.ಪ್ರಥಮ ಬಹುಮಾನವಾಗಿ 1,00,006 ಹಾಗೂ ಟ್ರೋಫಿ,ದ್ವಿತೀಯ ಬಹುಮಾನವಾಗಿ 50,006 ಹಾಗೂ ಟ್ರೋಫಿಯನ್ನು ವಿಜೇತರಾದ ತಂಡದವರಿಗೆ ನೀಡಲಾಯಿತು. ಬೈಂದೂರು ಸ್ಪೋರ್ಟ್ಸ್ […]

ಶ್ರೀಸುಬ್ರಹ್ಮಣ್ಯ ದೇವರಿಗೆ ನಾಗಮಂಡಲೋತ್ಸವ ಸೇವೆ

ಕುಂದಾಪುರ:ತಾಲೂಕಿನ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಬುಧವಾರ ಹಾಲಿಟ್ಟು ಸೇವೆ,ನಾಗಮಂಡಲ ಸೇವೆ ಜರುಗಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀಸುಬ್ರಹ್ಮಣ್ಯ ದೇವರ ದರ್ಶನ ಪಡೆದರು.

ಶ್ರೀಸುಬ್ರಹ್ಮಣ್ಯ ದೇವರಿಗೆ ತುಲಾಭಾರ ಸೇವೆ ಸಮರ್ಪಣೆ

ಕುಂದಾಪುರ:ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀದೆವರಿಗೆ ತುಲಾಭಾರ ಸೇವೆ,ಹಣ್ಣುಕಾಯಿ,ಮಂಗಳಾರತಿ,ಹರಿವಾಣ ನೈವೇದ್ಯ ಸೇವೆ,ಅನ್ನದಾನ ಸೇವೆ ಬುಧವಾರ ನಡೆಯಿತು.ಕಷ್ಟ ಕಾಲದಲ್ಲಿ ಹೇಳಿಕೊಂಡ ತುಲಾಭಾರ ಸೇವೆಯನ್ನು ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಭಕ್ತರು ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ ಶೆಟ್ಟಿ,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು. ಸಾರ್ವಜನಿಕ ಅನ್ನಸಂತರ್ಪಣೆಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ಮಂಗಳವಾರ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ […]

You cannot copy content of this page