ಕಿರಿಮಂಜೇಶ್ವರ:ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ

ಕುಂದಾಪುರ:ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಕಿರಿಮಂಜೇಶ್ವರ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಅದ್ಧೂರಿಯಾಗಿ ಶನಿವಾರ ನಡೆಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ‌ ಅವರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಉದ್ಘಾಟಿಸಿ ಮಾತನಾಡಿ,ಮಕ್ಕಳ ಒಳಗೆ ಅಡಗಿರುವ ಪ್ರತಿಭೆಯನ್ನು ಹೊರ ತರುವಲ್ಲಿ ಪ್ರತಿಭಾ ಕಾರಂಜಿ ಅಂತಹ ಕಾರ್ಯಕ್ರಮಗಳು ಬಹಳಷ್ಟು ಉಪಯೋಗಕಾರಿ ಆಗಿದೆ.ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವುದರಿಂದ ಮಗುವಿನ ಬೌದ್ಧಿಕ ಶಕ್ತಿ ವೃದ್ಧಿ […]

ಸಂಜೀವಿನಿ ಕಜೆ ಅಕ್ಕಿ ಮಾರುಕಟ್ಟೆಗೆ ಬಿಡುಗಡೆ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮೃದ್ಧಿ ಸಂಜೀವಿನಿ ಒಕ್ಕೂಟದ ಸದಸ್ಯರು ಹಡಿಲು ಭೂಮಿಯಲ್ಲಿ ಬೆಳೆದ ಅಕ್ಕಿಯನ್ನು ಸಂಜೀವಿನಿ ಕಜೆ ಅಕ್ಕಿ ಎನ್ನುವ ಹೆಸರಿನ ಮೂಲಕ ಗುರುವಾರ ಗುಜ್ಜಾಡಿ ಪಂಚಾಯಿತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಕುಂದಾಪುರ ಇಒ ಶಶಿಧರ್,ಜಿಲ್ಲಾ ವ್ಯವಸ್ಥಾಪಕರು ಕೃಷಿ ಎನ್‍ಎಲ್‍ಆರ್‍ಎಂ ಸೌಮ್ಯ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯತೀಶ್,ತಾಲೂಕು ಒಕ್ಕೂಟದ ಅಧ್ಯಕ್ಷೆ ವಿಜಯ ಗಾಣಿಗ,ಸಮೃದ್ಧಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ರೆನಿಟಾ,ಪಂಚಾಯತ್ ಸದಸ್ಯೆ ಜೆಸಿಂತಾ,ತಾಲ್ಲೂಕು ಮೇಲ್ವಿ […]

ಶ್ರೀಅಯ್ಯಪ್ಪ ಸ್ವಾಮಿ ಭಕ್ತವೃಂದ ಹೊಸಾಡು

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಚಪ್ಪರದಲ್ಲಿ ಶ್ರೀಅಯಪ್ಪ ಸ್ವಾಮಿ ಮಾಲಾಧಾರಿಗಳ ಶಬರಿಮಲೆ ಯಾತ್ರೆ ಪ್ರಯುಕ್ತ ಗಣಹೋಮ,ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ,ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಮಂಗಳಾರತಿ,ಭಜನಾ ಕಾರ್ಯಕ್ರಮ,ಸಾರ್ವಜನಿಕ ಮಹಾ ಅನ್ನಸಂತರ್ಪಣೆ,ಯಕ್ಷಗಾನ ಕಾರ್ಯಕ್ರಮ ಗುರುವಾರ ನಡೆಯಿತು.ಡಿ.24 ರಂದು ಭಾನುವಾರ ಇರುಮುಡಿ ಕಟ್ಟುವ ಕಾರ್ಯಕ್ರಮ ಜರುಗಲಿದೆ.

You cannot copy content of this page