ಹೆಮ್ಮಾಡಿ:ಆರ್ಯ ಬಿಲ್ಡ್ ಕೇರ್ ನೂತನ ಸಂಸ್ಥೆ ಉದ್ಘಾಟನೆ

ಬೈಂದೂರು:ಕುಂದಾಪುರ ತಾಲೂಕಿನ ಹೆಮ್ಮಾಡಿಯಲ್ಲಿ ಆರ್ಯ ಬಿಲ್ಡ್ ಕೇರ್ ನೂತನ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮ ಅದ್ದೂರಿಯಾಗಿ ಸೋಮವಾರ ನಡೆಯಿತು.ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ವಿವಿಧ ರೀತಿಯ ಧಾರ್ಮಿಕ ಕಾರ್ಯಕ್ರಮಗಳು ಜರುಗಿತು.ಉತ್ತಮ ಗುಣಮಟ್ಟದ ಸೇವೆಯನ್ನು ನೀಡುವುದರ ಜತೆಗೆ ಯುವ ಜನತೆಗೆ ಉದ್ಯೋಗವಕಾಶವನ್ನು ಮಾಡಿಕೊಡುವುದು ಸಂಸ್ಥೆಯ ಮೂಲ ಉದ್ದೇಶವಾಗಿದೆ. ಎಮಿಯೆಂಟೆಕ್ ಸಿಎಂಡಿ ಸಿಜಿತ್ ಆರ್ಯ ಬಿಲ್ಡ್ ಕೇರ್ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿ,ಸಾರ್ವಿನ್ ಪ್ಲಾಸ್ಟ್ ಎನ್ನುವುದು ಜಿಪ್ಸಮ್ ಆಗಿದ್ದು,ಮನೆ ಮತ್ತು ಕಟ್ಟಡಗಳ ನಿರ್ಮಾಣದಲ್ಲಿ ಬಳಸ ಬಹುದಾಗಿದೆ.ಕ್ವಾಲಿಟಿ ಉತ್ತಮವಾಗಿದ್ದು ಗ್ರಾಹಕರಿಗೆ ಒಳ್ಳೆಯ ರೀತಿ ಅನುಭವನ್ನು […]

ಇತಿಹಾಸ ಪ್ರಸಿದ್ಧ ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನ ಶಿರೂರು ವಾರ್ಷಿಕ ಜಾತ್ರಾ ಮಹೋತ್ಸವ

ಬೈಂದೂರು:ತಾಲೂಕಿನ ಶಿರೂರು ಶ್ರೀ ಜೈನ ಶೇಡಿಬೀರ ನಾಗ ಪರಿವಾರ ದೈವಸ್ಥಾನದ ವಾರ್ಷಿಕ ಹಾಲು ಹಬ್ಬ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಸೋಮವಾರ ಅದ್ದೂರಿಯಾಗಿ ನಡೆಯಿತು.ಅನಾದಿ ಕಾಲದಿಂದಲೂ ನಡೆದು ಬಂದ ಪದ್ಧತಿ ಅಂತೆ ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನಾಭರಣವನ್ನುಆರ್ಮಕ್ಕಿ ಮನೆಯಿಂದ ವೈಭವದ ಮೆರವಣಿಗೆ ಮೂಲಕ ತರಲಾಗುತ್ತದೆ.ಪೂಜೆ ಸಲ್ಲಿಸಿ ದೇವರಿಗೆ ಚಿನ್ನಾಭರಣವನ್ನು ತೋಡಿಸುವುದರ ಮೂಲಕ ವಾರ್ಷಿಕವಾಗಿ ನಡೆಯುವ ಜಾತ್ರೆಗೆ ಚಾಲನೆ ಸಿಗುತ್ತದೆ.ಜೈನ ಶೇಡಿಬೀರ ದೇವರಿಗೆ ಸಮರ್ಪಿಸುವ ಚಿನ್ನವನ್ನು ಆರ್ಮಕ್ಕಿ ಮನೆಯಲ್ಲಿ ಪೂಜಿಸಿ, ಸಿಹಿಯನ್ನು ವಿತರಿಸುವ ಪದ್ಧತಿಯೂ […]

ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವರ ವಾರ್ಷಿಕ ಷಷ್ಠಿ ಮಹೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ವಿಜೃಂಭಣೆಯಿಂದ ನಡೆಯಿತುಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀಸುಬ್ರಹ್ಮಣ್ಯ ದೇವರಿಗೆ ವಿಶೇಷ ಹೂವಿನ ಅಲಂಕಾರ ಪೂಜೆ,ಮಂಗಳಾರತಿ ಸೇವೆ,ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ,ಪ್ರಧಾನಹೋಮ,ನವಕಲಶಾಭಿಷೇಕ,ಕಲಶಾಭಿಷೇಕ,ಹರಿವಾಣ ನೆವೇದ್ಯ ಸೇವೆ,ಮಡೆ ಪ್ರದಕ್ಷಿಣೆ,ಶ್ರೀನಾಗದರ್ಶನ,ಬ್ರಾಹ್ಮಣ ಸಂತರ್ಪಣೆ ಮತ್ತು ಸಾರ್ವಜನಿಕ ಪ್ರಸಾದ ವಿತರಣೆ,ಗಣಪತಿ ಪ್ರಾರ್ಥನೆ ಜರುಗಿತು.ಕುಂದಾಪುರ ಮತ್ತು ಬೈಂದೂರು ತಾಲೂಕಿನ ಜನರು ಸೇರಿದಂತೆ ಘಟ್ಟದ ಮೇಲಿನ ಭಕ್ತರು ಶ್ರೀಕ್ಷೇತ್ರಕ್ಕೆ ಆಗಮಿಸಿ ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ […]

You cannot copy content of this page