ನಾವುಂದ:ಇತಿಹಾಸ ಪ್ರಸಿದ್ಧ ನಾವುಂದ ಕಂಬಳ ಮಹೋತ್ಸವ

ಬೈಂದೂರು:ಇತಿಹಾಸ ಪ್ರಸಿದ್ಧ ಸಾಂಪ್ರದಾಯಿಕ ನಾವುಂದ ಕಂಬಳ ಮಹೋತ್ಸವ ಬುಧವಾರ ನಡೆಯಿತು.ಕಂಬಳಕ್ಕೆ ಬರುವ ಕೋಣಗಳನ್ನು ವೀಳ್ಯ, ತೆಂಗಿನಕಾಯಿ ನೀಡಿ ಬರಮಾಡಿಕೊಳ್ಳಲಾಗುತ್ತದೆ ವಿಶಾಲವಾದ ಈ ಕಂಬಳ ಗದ್ದೆಯನ್ನು ತೋರಣಗಳಿಂದ ಅಲಂಕಾರಿಸಲಾಗುತ್ತದೆ.ಹಲವಾರು ವರ್ಷಗಳಿಂದ ಕಂಬಳವನ್ನು ಉಳಿಸಿ ಬೆಳೆಸಿಕೊಂಡು ಬಂದಿರುವ ವೆಂಕಟರಮಣ ಗಾಣಿಗ ನಾವುಂದ ಅವರ ಕೋಣಗಳನ್ನು ಗದ್ದೆಗೆ ಇಳಿಸುವ ಮೂಲಕ ಕಂಬಳಕ್ಕೆ ಹಸಿರು ನಿಶಾನೆ ಸಿಕ್ಕಂತಾಗುತ್ತದೆ.ಈ ಬಾರಿ ಸೆನ್ಸಾರ್ ಮೂಲಕ ಕೋಣದ ಓಟದ ವೇಗಮಿತಿಯನ್ನು ಅಳೆಯುವ ಸಾಧನ ಅಳವಡಿಸಲಾಗಿದೆ. ಹಗ್ಗದ ಓಟ ಹಿರಿಯ ವಿಭಾಗ ,ಕೋಣಗಳ ಹಗ್ಗದ ಓಟ ಕಿರಿಯ ವಿಭಾಗ […]

ಅಧ್ಯಕ್ಷರಾಗಿ ನಾಗೇಶ ಖಾರ್ವಿ ಆಯ್ಕೆ

ಕುಂದಾಪುರ:ಶ್ರೀರಾಮ ದೇವಸ್ಥಾನ ಕಂಚುಗೋಡು ಅದರ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ನಾಗೇಶ ಖಾರ್ವಿ ಹಾಗೂ ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಆಯ್ಕೆಯಾಗಿದ್ದಾರೆ.

ಸಂಸದ ಬಿ.ವೈ ರಾಘವೇಂದ್ರ,ಸಚಿವ ಗಡ್ಕರಿ ಭೇಟಿ

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚುರುಕು ನೀಡುವಂತೆ ಮನವಿಯನ್ನು ನೀಡಿದರು.ತ್ರಾಸಿ,ಮುಳ್ಳಿಕಟ್ಟೆ,ತಲ್ಲೂರು,ಹೆಮ್ಮಾಡಿ ಜಂಕ್ಷನ್ ಮತ್ತು ಪ್ಲೈವರ್ ಅಭಿವೃದ್ಧಿ,ಬೈಂದೂರು ಜಂಕ್ಷನ್ ಪ್ಲೈವರ್,ಯಡ್ತರೆ ಪ್ಲೈವರ್ ಮತ್ತು ಸರ್ವಿಸ್ ರಸ್ತೆ,ಶಿರೂರು-ನೀರ್ಗದ್ದೆ ವರೆಗೆ ಸರ್ವಿಸ್ ರಸ್ತೆ,ಬಸ್ಸು ನಿಲ್ದಾಣ,ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿ ಕೆಲಸಕ್ಕೆ ವೇಗ ನೀಡುವಂತೆ ಸಂಸದ ಬಿ.ವೈ ರಾಘವೇಂದ್ರ […]

You cannot copy content of this page