ಗುಜ್ಜಾಡಿ:ಶ್ರೀ ಜಟ್ಟಿಗೇಶ್ವರ ಸಮುದಾಯ ಭವನ ಉದ್ಘಾಟನೆ
ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಣೆಗೆರೆ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಿಸಿದರು ಶ್ರೀ ಜಟ್ಟಿಗೇಶ್ವರ ಸಮುದಾಯ ಭವನವದ ಉದ್ಘಾಟನಾ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ ನಡೆಯಿತು.ಸಭಾಭವನದ ನಿರ್ಮಾಣಕ್ಕೆ ಧನಸಾಹಯ ಮಾಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.ಮಕರ ಸಂಕ್ರಮಣದ ಅಂಗವಾಗಿ ಶ್ರೀಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿಯ ವಾರ್ಷಿಕ ಹಾಲು ಹಬ್ಬ ನಡೆಯಿತು.ಅನ್ನದಾನ ಸೇವೆ ಜರುಗಿತು.ಕುಂದಾಪುರ,ಬೈಂದೂರು ತಾಲೂಕು ಸೇರಿದಂತೆ ಇತರ ಜಿಲ್ಲೆಗಳಿಂದ ಭಕ್ತರು ದೈವದ ಮನೆಗೆ ಆಗಮಿಸಿ ಹರಕೆಯನ್ನು ಸಲ್ಲಿಸಿದರು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳಿ […]



























































































































































































































































































































































































































































































































































































































































































































































































































































































































































































































































































































































































































































































































































































































































































