ಅಂಬಾ ಪ್ರೀಮಿಯರ್ ಲೀಗ್,ರಾಘು ಟ್ರೋಫಿ ಉದ್ಘಾಟನೆ

ಕುಂದಾಪುರ:ವಿದ್ಯದ ಜತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಜೀವನ ಹಸನಾಗಲಿದೆ ಭವಿಷ್ಯವನ್ನು ಉನ್ನತೀಕರಣಗೊಳಿಸುವಲ್ಲಿ ಕ್ರೀಡೆ ಒಳ್ಳೆ ರೀತಿಯಾದ ಮಾರ್ಗದರ್ಶಿ ಸೂತ್ರವನ್ನು ಒದಗಿಸಿಕೊಡುತ್ತೆ ಎಂದು ಉದ್ಯಮಿ ಚಿತ್ತರಂಜನ್ ಹೆಗ್ಡೆ ಹರ್ಕೂರು ಹೇಳಿದರು.ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಶನಿವಾರ ನಡೆದ 28ನೇ ವರ್ಷದ ಅಂಬಾ ಪ್ರೀಯರ್ ಲೀಗ್ ರಾಘು ಟ್ರೋಫಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಕ್ಲಾಡಿ ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಯಳೂರು ಮಾತನಾಡಿ,ಕ್ರಿಕೆಟ್ ಎನ್ನುವುದು ಕೇವಲ ಪಂದ್ಯಾಟಕ್ಕೆ ಮಾತ್ರ ಸೀಮಿತವಾಗಿರಿಸದೆ ಅಂಬಾ ಕ್ರಿಕೆಟರ್ಸ್ ತಂಡ ಸಾಮಾಜಿಕ ಮತ್ತು ಶೈಕ್ಷಣಿಕ […]

ವೀರೇಂದ್ರ ಸೆಹ್ವಾಗ್ ಬೈಂದೂರು ಶಾಸಕರ ಆಹ್ವಾನ

ಕುಂದಾಪುರ:ಖ್ಯಾತ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ತ್ರಾಸಿ ಬೀಚ್ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಭಾರತೀಯ ಬೀಚ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದ್ದರು.ಇದನ್ನು ಗಮಿಸಿದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಶ್ವ ವಿಖ್ಯಾತ ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುವಂತೆ ವೀರೇಂದ್ರ ಸೆಹ್ವಾಗ್ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ವೆಲ್‍ಕಲ್‍ಂ ಸೆಹ್ವಾಗ್ ಎಂದು ಟ್ಯಾಗ್ ಮಾಡುವ ಮೂಲಕ ಆಹ್ವಾನವನ್ನು ನೀಡಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿರುವುದನ್ನು […]

ಜ.16 ರಂದು ಗುಡ್ಡಮ್ಮಾಡಿ ಷಷ್ಠಿ ಮಹೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ಜ.16 ಮತ್ತು ಜ.17 ರಂದು ನಡೆಯಲಿದೆ.ಜ.14 ರಂದು ಸಂಕ್ರಾತಿ ಪೂಜೆ ನೆರವೇರಲಿದೆ.ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಜ.16 ರಂದು ಮಂಗಳವಾರ ಬೆಳಿಗ್ಗೆ ಗಣಪತಿ ಪ್ರಾರ್ಥನೆ,ನವಕಲಶಾಭಿಷೇಕ,10.30 ರಿಂದ ಮಡೆ ಪ್ರದಕ್ಷಿಣೆ,ಶ್ರೀನಾಗ ದರ್ಶನ,ಬ್ರಾಹ್ಮಣ ಸಂತರ್ಪಣೆ ಸಂಜೆ 4ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ಜರುಗಲಿದೆ.ಜ.17 ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಲಿಟ್ಟು ಸೇವೆ.9.30ಕ್ಕೆ ನಾಗಮಂಡಲೋತ್ಸವ,ಬೆಳಿಗ್ಗೆ 11 ರಿಂದ ತುಲಾಭಾರ […]

You cannot copy content of this page