ವೀರೇಂದ್ರ ಸೆಹ್ವಾಗ್ ಬೈಂದೂರು ಶಾಸಕರ ಆಹ್ವಾನ

ಕುಂದಾಪುರ:ಖ್ಯಾತ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ಅವರು ಉಡುಪಿ ಜಿಲ್ಲೆಯ ತ್ರಾಸಿ ಬೀಚ್ ಫೋಟೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು ಭಾರತೀಯ ಬೀಚ್ ಪ್ರವಾಸೋದ್ಯಮವನ್ನು ಪ್ರೋತ್ಸಾಹಿಸುವಂತೆ ಕರೆ ನೀಡಿದ್ದರು.ಇದನ್ನು ಗಮಿಸಿದ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ವಿಶ್ವ ವಿಖ್ಯಾತ ತ್ರಾಸಿ-ಮರವಂತೆ ಬೀಚ್‍ಗೆ ಆಗಮಿಸುವಂತೆ ವೀರೇಂದ್ರ ಸೆಹ್ವಾಗ್ ಅವರಿಗೆ ತಮ್ಮ ಎಕ್ಸ್ ಖಾತೆಯಲ್ಲಿ ವೆಲ್‍ಕಲ್‍ಂ ಸೆಹ್ವಾಗ್ ಎಂದು ಟ್ಯಾಗ್ ಮಾಡುವ ಮೂಲಕ ಆಹ್ವಾನವನ್ನು ನೀಡಿದ್ದಾರೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಕ್ಷ ದ್ವೀಪಕ್ಕೆ ಭೇಟಿ ನೀಡಿರುವುದನ್ನು […]

ಜ.16 ರಂದು ಗುಡ್ಡಮ್ಮಾಡಿ ಷಷ್ಠಿ ಮಹೋತ್ಸವ

ಕುಂದಾಪುರ:ತಾಲೂಕಿನ ಪ್ರಸಿದ್ಧ ಸೇನಾಪುರ ಗ್ರಾಮದ ಶ್ರೀಕ್ಷೇತ್ರ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ಷಷ್ಠಿ ಮಹೋತ್ಸವ ಕಾರ್ಯಕ್ರಮ ಜ.16 ಮತ್ತು ಜ.17 ರಂದು ನಡೆಯಲಿದೆ.ಜ.14 ರಂದು ಸಂಕ್ರಾತಿ ಪೂಜೆ ನೆರವೇರಲಿದೆ.ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಅಂಗವಾಗಿ ಜ.16 ರಂದು ಮಂಗಳವಾರ ಬೆಳಿಗ್ಗೆ ಗಣಪತಿ ಪ್ರಾರ್ಥನೆ,ನವಕಲಶಾಭಿಷೇಕ,10.30 ರಿಂದ ಮಡೆ ಪ್ರದಕ್ಷಿಣೆ,ಶ್ರೀನಾಗ ದರ್ಶನ,ಬ್ರಾಹ್ಮಣ ಸಂತರ್ಪಣೆ ಸಂಜೆ 4ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ಜರುಗಲಿದೆ.ಜ.17 ರಂದು ಬುಧವಾರ ಬೆಳಿಗ್ಗೆ 6 ಗಂಟೆಗೆ ಹಾಲಿಟ್ಟು ಸೇವೆ.9.30ಕ್ಕೆ ನಾಗಮಂಡಲೋತ್ಸವ,ಬೆಳಿಗ್ಗೆ 11 ರಿಂದ ತುಲಾಭಾರ […]

ಕನಕ ಜಗದೀಶ್ ಶೆಟ್ಟಿಗೆ ವಿದ್ಯಾ ಪೋಷಕ ರತ್ನ ಪ್ರಶಸ್ತಿ

ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳಿಂದ ದತ್ತು ತೆಗೆದು ಕೊಂಡು ಬಡ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹವನ್ನು ನೀಡುತ್ತಿರುವ ಕನಕ ಗ್ರೂಪ್ ಜಗದೀಶ್ ಶೆಟ್ಟಿ ಕುದ್ರುಕೋಡು ಅವರನ್ನು ಜ.13 ರಂದು ಶಾಲೆಯಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಮತ್ತು ಶಾಲಾ ಮಕ್ಕಳ ಪೋಷಕ ವೃಂದದವರ ವತಿಯಿಂದ ವಿದ್ಯಾ ಪೋಷಕ ಪ್ರಶಸ್ತಿಯನ್ನು ನೀಡಿ ಗೌರವಿಸಲಿದ್ದಾರೆ. ಸರಕಾರಿ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಉದ್ಯಮಿ:ನಾವುಂದ 5.ಸೆಂಟ್ಸ್ […]

You cannot copy content of this page