ಜ.20,21 ರಂದು ಕಂಚುಗೋಡು ಶಾಲೆ ಅಮೃತ ಮಹೋತ್ಸವ
ಕುಂದಾಪುರ:ಅಮೃತ ಮಹೋತ್ಸವ ಕಾರ್ಯಕ್ರಮ ಎನ್ನುವುದು ಕೇವಲ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ ಶಾಲಾಭಿವೃದ್ಧಿಗೆ ಹೆಚ್ಚಿನ ಒತ್ತನ್ನು ನೀಡಲಾಗುತ್ತಿದೆ ಎಂದು ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ವಾಸುದೇವ ಖಾರ್ವಿ ಹೇಳಿದರು.ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಕಂಚುಗೋಡು ಶಾಲೆಯಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ಶಾಲಾ ಮಕ್ಕಳಿಗೆ ಅನುಕೂಲವಾಗುವ ದೃಷ್ಟಿಯಿಂದ ಶಾಲಾ ವಾಹನದ ವ್ಯವಸ್ಥೆ ಸಹಿತ ಸ್ಮಾರ್ಟ್ ಕ್ಲಾಸ್ ನಿರ್ಮಾಣ,ಇಂಗ್ಲಿಷ್ ಸ್ಪಿಕಿಂಗ್ ಕ್ಲಾಸ್,ಶುದ್ಧ ಕುಡಿಯುವ ನೀರಿನ ಘಟಕ […]





























































































































































































































































































































































































































































































































































































































































































































































































































































































































































































































































































































































































































































































































































































































































































