ಸಂಸದ ಬಿ.ವೈ ರಾಘವೇಂದ್ರ,ಸಚಿವ ಗಡ್ಕರಿ ಭೇಟಿ

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ ರಾಘವೇಂದ್ರ ಅವರು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಬೈಂದೂರು ಕ್ಷೇತ್ರದಲ್ಲಿ ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳಿಗೆ ಚುರುಕು ನೀಡುವಂತೆ ಮನವಿಯನ್ನು ನೀಡಿದರು.ತ್ರಾಸಿ,ಮುಳ್ಳಿಕಟ್ಟೆ,ತಲ್ಲೂರು,ಹೆಮ್ಮಾಡಿ ಜಂಕ್ಷನ್ ಮತ್ತು ಪ್ಲೈವರ್ ಅಭಿವೃದ್ಧಿ,ಬೈಂದೂರು ಜಂಕ್ಷನ್ ಪ್ಲೈವರ್,ಯಡ್ತರೆ ಪ್ಲೈವರ್ ಮತ್ತು ಸರ್ವಿಸ್ ರಸ್ತೆ,ಶಿರೂರು-ನೀರ್ಗದ್ದೆ ವರೆಗೆ ಸರ್ವಿಸ್ ರಸ್ತೆ,ಬಸ್ಸು ನಿಲ್ದಾಣ,ಬೀದಿ ದೀಪ ಅಳವಡಿಕೆ ಸೇರಿದಂತೆ ವಿವಿಧ ಕಾಮಗಾರಿ ಕೆಲಸಕ್ಕೆ ವೇಗ ನೀಡುವಂತೆ ಸಂಸದ ಬಿ.ವೈ ರಾಘವೇಂದ್ರ […]

ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ

ಗಂಗೊಳ್ಳಿ:ಉಡುಪಿ ಜಿಲ್ಲಾ ಪೊಲೀಸ್ ಕುಂದಾಪುರ ವಿಭಾಗ,ಬೈಂದೂರು ವೃತ್ತ,ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆ ಹಾಗೂ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ ತ್ರಾಸಿ ಅಣ್ಣಪ್ಪಯ್ಯ ಸಭಾಭವನದಲ್ಲಿ ಮಂಗಳವಾರ ನಡೆಯಿತು.ಗಂಗೊಳ್ಳಿ ಪೊಲೀಸ್ ಠಾಣೆ ಠಾಣಾಧಿಕಾರಿ ಹರೀಶ್ ಮಾದಕ ದ್ರವ್ಯ ಸೇವನೆ ಯಿಂದಾಗುವ ದುಷ್ಪರಿಣಾಮ ಮತ್ತು ಸಂಚಾರ ನಿಯಮ ಸುರಕ್ಷತೆ ಬಗ್ಗೆ ಮಾಹಿತಿಯನ್ನು ನೀಡಿದರು.ಈ ಸಂದರ್ಭ ಬಸ್ ಮಾಲೀಕರು ಮತ್ತು ಚಾಲಕರು,ಆಟೋ ಮಾಲೀಕ ಮತ್ತು ಚಾಲಕ ಸಂಘದ ಸದಸ್ಯರು,ಸ್ಥಳೀಯರು,ಪೊಲೀಸ್ ಠಾಣೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಪ್ರತಭಾ ಕಾರಂಜಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ನಾಗೇಶ್ ನಾಯಕ್ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಅವರು ಜಂಟಿಯಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಿರಿಮಂಜೇಶ್ವರ ಶಾಲೆಯಲ್ಲಿ ಬಿಡುಗಡೆಗೊಳಿಸಿದರು.ಸರಕಾರಿ ಹಿರಿಯ ಪ್ರಾಥಮಿಕ ಕಿರಿಮಂಜೇಶ್ವರ ಶಾಲೆಯ ಮುಖ್ಯ ಶಿಕ್ಷಕರಾದ ಶೇಖರ್ ಪೂಜಾರಿ,ಶ್ರೀ ಅಗಸ್ತ್ಯೇಶ್ವರ ದೇವಸ್ಥಾನ ಕಿರಿಮಂಜೇಶ್ವರ ಆಡಳಿತ ಸಮಿತಿ ಅಧ್ಯಕ್ಷ ಪ್ರಕಾಶ್ ಐತಾಳ್,ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷರಾದ ಜಯಾನಂದ ಪಟಗಾರ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಉಮೇಶ್ ನಾಯರಿ,ಪ್ರಾಥಮಿಕ ಶಾಲಾ ಶಿಕ್ಷಕ […]

You cannot copy content of this page