ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

ಕುಂದಾಪುರ:ಕೊಬ್ಬರಿ ಧಾರಣೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿರುವ ತೆಂಗು ಬೆಳೆಗಾರರಿಗೆ ಕೇಂದ್ರ ಸರಕಾರ ಬೆಂಬಲ ಬೆಲೆ ಘೋಷಣೆ ಮಾಡಿರುವುದರಿಂದ ಕರಾವಳಿ ಸಹಿತ ದೇಶದ ತೆಂಗು ಬೆಳೆಗಾರರ ಮೊಗದಲ್ಲಿ ಸಂತಸ ಮೂಡಿಸಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ತಿಳಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯು ದೇಶದ ತೆಂಗು ಬೆಳೆಗಾರರ ಸಂಕಷ್ಟವನ್ನು ಅರಿತು ಬೆಂಬಲ ಬೆಲೆ ಹೆಚ್ಚಿಸುವ ನಿರ್ಧಾರವನ್ನು ತನ್ನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದೆ. ಮೋದಿ ಸರ್ಕಾರದ ಈ ನಿರ್ಧಾರದಿಂದ.ಕೇಂದ್ರ […]

ಸಾವಿನಲ್ಲೂ ಸಾರ್ಥಕತೆ ಮೆರೆದ ಕುಶಲ ಶೆಟ್ಟಿ ಆಲೂರು

ಕುಂದಾಪುರ:ತಾಲೂಕಿನ ಆಲೂರು ಗ್ರಾಮ ಪಂಚಾಯತ್ ಹಾಗೂ ಆಲೂರು ಸಹಕಾರಿ ಸಂಘದ ಮಾಜಿ ಅಧ್ಯಕ್ಷರು ಮತ್ತು ಗ್ರಾಮ ವಿಕಾಸ ಸಮಿತಿ ಕಾರ್ಯಕರ್ತರಾದ ಆಲೂರು ಗ್ರಾಮದ ನಿವಾಸಿ ಕುಶಲ ಶೆಟ್ಟಿ (65) ಅವರು ಅನಾರೋಗ್ಯ ಕಾರಣದಿಂದ ಬುಧವಾರ ನಿಧನರಾದರು.ಅವರಿಗೆ ಪತ್ನಿ,ಓರ್ವ ಪುತ್ರಿ ಇದ್ದಾರೆ.ಸಮಾಜ ಮುಖಿ ಚಿಂತನೆಗಳನ್ನು ಮೈಗೂಡಿಸಿಕೊಂಡಿದ್ದ ಕುಶಲ ಶೆಟ್ಟಿ ಅವರು ಕಳೆದ ಏಳು ವರ್ಷಗಳ ಹಿಂದೆಯೇ ತಮ್ಮ ದೇಹವನ್ನು ದಾನ ಮಾಡುವುದರ ಮುಖೇನ ಮಾದರಿ ಹೆಜ್ಜೆಯನ್ನು ಇಟ್ಟಿದ್ದರು.ಕುಶಲ ಶೆಟ್ಟಿ ಅವರ ಮೃತದೇಹವನ್ನು ಸಾರ್ವಜನಿಕರ ದರ್ಶನಕ್ಕೆ ಇಟ್ಟ ಬಳಿಕ ಅವರ […]

ಆಲೂರು ಪ್ರೌಢಶಾಲೆ ವಿದ್ಯಾರ್ಥಿಗಳು,ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ:ಭಾರತ ಚುನಾವಣ ಆಯೋಗ,ಜಿಲ್ಲಾಧಿಕಾರಿಗಳ ಕಚೇರಿ ಉಡುಪಿ,ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಉಪನಿರ್ದೇಶಕರ ಕಚೇರಿ ಉಡುಪಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಮತದಾರ ಕ್ಲಬ್‍ನ ರಸಪ್ರಶ್ನೆ ಸ್ಪರ್ಧೆಯಲ್ಲಿ ಆಲೂರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳಾದ ಗ್ರೀಷ್ಮಾ ಮತ್ತು ಪ್ರಜ್ಞಾ ಅವರು ಮೈಸೂರಿನಲ್ಲಿ ನಡೆಯುವ ರಾಜ್ಯದ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

You cannot copy content of this page