ಹೊಸಾಡು ಶಾಲೆ ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ ಪುತ್ರನ್ ಆಯ್ಕೆ

ಕುಂದಾಪುರ:ತಾಲೂಕಿನ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪೂರ್ವಾಭಾವಿ ಸಭೆ ಹೊಸಾಡು ಶಾಲೆಯಲ್ಲಿ ಭಾನುವಾರ ನಡೆಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ್ ಪುತ್ರನ್ ಅರಾಟೆ ಅವರು ಸರ್ವಾನುಮತದಿಂದ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್,ಶತಾಬ್ಧಿ ಯೋಜನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅರಾಟೆ,ಕೋಶಾಧಿಕಾರಿಯಾಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ಡಾ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ,ರಾಜೀವ ಶೆಟ್ಟಿ,ಎಂ.ಎಂ ಸುವರ್ಣ,ವಕೀಲರಾದ ಮಂಜುನಾಥ ಅರಾಟೆ,ಹಳೆ ವಿದ್ಯಾರ್ಥಿ […]

ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು ಗೋಳಿಹೊಳೆ-ಸೌಹಾರ್ದ ಸಹಕಾರಿ ದಿನಾಚರಣೆ

ಬೈಂದೂರು:ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಬೈಂದೂರು-ಗೋಳಿಹೊಳೆ ವತಿಯಿಂದ ಸೌಹಾರ್ದ ಸಹಕಾರಿ ದಿನಾಚರಣೆ, ಗ್ರಾಹಕರ ಸಭೆ ಮಹಿಷಮರ್ಧಿನಿ ಸಭಾಭವನ ಗೋಳಿಹೊಳೆಯಲ್ಲಿ ಅದ್ದೂರಿಯಾಗಿ ಸೋಮವಾರ ನಡೆಯಿತು.ಸೌಹಾರ್ದ ಸಹಕಾರಿ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಸಂಘದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.ಆಶಾ ಕಾರ್ಯಕರ್ತೆಯರನ್ನು ಗೌರವಿಸಲಾಯಿತು.ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು. ಕರ್ನಾಟಕ ರಾಜ್ಯ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ನಿರ್ದೇಶಕರಾದ ಎಸ್.ಕೆ ಮಂಜುನಾಥ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಕಾಡಂಚಿನ ಪ್ರದೇಶವನ್ನು ಹೊಂದಿರುವ ಗೋಳಿಹೊಳೆ ಅಂತಹ ಪ್ರದೇಶದಲ್ಲಿ ಸೌಹಾರ್ದ […]

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆ ವಾರ್ಷಿಕೋತ್ಸವ

ಬೈಂದೂರು:ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ಶಾಲಾ ವಠಾರದಲ್ಲಿ ಶನಿವಾರ ನಡೆಯಿತು.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ವೈವಿಧ್ಯಮ ಮನೋರಂಜನ ಮತ್ತು ನೃತ್ಯ ಕಾರ್ಯಕ್ರಮ ಹಾಗೂ ವೀರ ಅಭಿಮನ್ಯು ಎಂಬ ಯಕ್ಷಗಾನ ಪ್ರದರ್ಶನ ಜರುಗಿತು.ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.ಕಲಿಕಾ ಬಹುಮಾನ ವಿತರಿಸಲಾಯಿತು. ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ,ಸರಕಾರಿ ಶಾಲೆಗಳಲ್ಲಿ ಓದಿದ ಬಹಳಷ್ಟು ಮಂದಿ ಇಂದು ಉನ್ನತ ಹುದ್ದೆಗಳನ್ನು ಪಡೆದು ಜನ ಸೇವೆಯೊಂದಿಗೆ ಉತ್ತಮವಾದ ಹೆಸರನ್ನು ಗಳಿಸಿದ್ದಾರೆ.ಆಧುನಿಕ ಯುಗದಲ್ಲಿ ಸಂಸ್ಕಾರಯುತ ಶಿಕ್ಷಣ ಎನ್ನುವುದು ಇಂದಿನ […]

You cannot copy content of this page