ತ್ರಾಸಿ:ಡಾನ್ ಬೋಸ್ಕೊ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ

ಕುಂದಾಪುರ:ಗ್ರಾಮೀಣ ಪ್ರದೇಶದಲ್ಲಿ 12 ವರ್ಷಗಳ ಹಿಂದೆ ನಿರ್ಮಾಣಗೊಂಡ ತ್ರಾಸಿ ಡಾನ್ ಬೋಸ್ಕೊ ಶಾಲೆ ಶಿಕ್ಷಣ ರೂಪದಲ್ಲಿ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಾ ಬಂದಿದೆ.ಇಲ್ಲಿನ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರ ಜತೆಗೆ ಪಠ್ಯೇತರ ಚಟುವಟಿಯಲ್ಲಿಯೂ ಭಾಗ ವಹಿಸಿ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿಗಳನ್ನು ಜಯಿಸಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ ಎಂದು ಡಾನ್ ಬೋಸ್ಕೊ ಶಾಲೆಯ ಪ್ರಿನ್ಸಿಪಾಲ್ ಫಾ.ಮ್ಯಾಕ್ಸಿಮ್ ಡಿಸೋಜ ಅವರು ಮಾತನಾಡಕುಂದಾಪುರ ತಾಲೂಕಿನ ತ್ರಾಸಿ ಡಾನ್ ಬೋಸ್ಕೊ ಶಾಲೆಯಲ್ಲಿ ಸೋಮವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಶಿಕ್ಷಣದ […]

ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು:ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಬಿಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಶಿಬಿರಕ್ಕೆ ಚಾಲನೆಯನ್ನು ನೀಡಿದರು.ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್, ಸದಸ್ಯರಾದ ವೀರೇಂದ್ರ ಶೆಟ್ಟಿ, ನಾಗರಾಜ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.ಲವಣ ಮಿಶ್ರಿತ ಆಹಾರದ ಪೊಟ್ಟಣ ವಿತರಿಸಲಾಯಿತು.ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ,ಡಾ.ರೆಡ್ಡಪ್ಪ ಎಂ.ಸಿ ಉಪನಿರ್ದೇಶಕರು (ಆಡಳಿತ) ರವರ ಮಾರ್ಗರ್ಶನದಲ್ಲಿ ಆರೋಗ್ಯ ತಪಾಸಣಾ ಶಿಬಿರ […]

ಚೈತನ್ಯ ವಿಮಾಯೋಜನೆ ಚೆಕ್ ವಿತರಣೆ

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನವೋದಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಯೋಜನೆ ಚೆಕ್ ಮತ್ತು ಅಪಘಾತ ವಿಮೆ ಯೋಜನೆ ಚೆಕ್‍ನ್ನು ವಿತರಿಸಲಾಯಿತು.ಈ ಸಂದರ್ಭ ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್,ನವೋದಯ ಚಾರಿಟೇಬಲ್ ಟ್ರಸ್ಟ್‍ನ ಸಿ.ಇ.ಒ ಪೂರ್ಣಿಮಾ,ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮತ್ತು ಅತಿಥಿಗಳು ಉಪಸ್ಥಿತರಿದ್ದರು.

You cannot copy content of this page