ಯೋಗಾ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ ಮಾಡಿದ ಅಂತಾರಾಷ್ಟ್ರೀಯ ಯೋಗ ಪಟು ತನ್ವಿತಾ ಪೂಜಾರಿ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕುಂದಬಾರಂದಾಡಿ ಗ್ರಾಮದ ನಿವಾಸಿ ಪುಷ್ಪಲತಾ ಮತ್ತು ವಸಂತ ಅವರ ದಂಪತಿಗಳ ಪುತ್ರಿ ಬಾಲ ಪ್ರತಿಭೆ ಕು.ತನ್ವಿತಾ ಪೂಜಾರಿ ಯೋಗಾಸನದಲ್ಲಿ ಚಿನ್ನ,ಬೆಳ್ಳಿ,ಕಂಚು ಸೇರಿದಂತೆ ಒಟ್ಟು 65 ಕ್ಕೂ ಅಧಿಕ ಪ್ರಶಸ್ತಿಗಳನ್ನು ಜಯಿಸುವುದದರ ಮೂಲಕ ಯೋಗಾಸನದಲ್ಲಿ ವಿಶಿಷ್ಟವಾದ ಸಾಧನೆ ಮಾಡುತ್ತಿದ್ದಾರೆ. ನಟ ದರ್ಶನ ಜತೆ ಕ್ರಾಂತಿ ಸಿನಿಮಾದಲ್ಲಿ ನಟನೆ ಮಾಡುವುದರ ಮುಖೇನ ಚಿತ್ರರಂಗದಲ್ಲಿಯೂ ಗುರುತಿಸಿ ಕೊಂಡಿದ್ದಾರೆ.ರಿಯಾಲಿಟಿ ಶೋ,ಭರತ ನಾಟ್ಯ,ಜಾಹೀರಾತು ವಿಭಾಗದಲ್ಲಿಯೂ ವಿಶೇಷ ರೀತಿಯ ಚಾಪನ್ನು ಮೂಡಿಸಿದ್ದಾರೆ.10 ನೇ ವಯಸ್ಸಿನಲ್ಲಿ ಯೋಗಾಭ್ಯಾಸದಲ್ಲಿ ಗುರುತಿಸಿಕೊಂಡಿರುವ ಬಹುಮುಖ ಪ್ರತಿಭೆಯನ್ನು […]

ಹೈನುಗಾರಿಕೆಯಲ್ಲಿ ವಿಶಿಷ್ಟ ಸಾಧನೆ ಮಾಡುತ್ತಿರುವ ಯಶಸ್ವಿ ಕೃಷಿಕ ಸಾಬ್ಲಾಡಿ ಮಂಜಯ್ಯ ಶೆಟ್ಟಿ

ಕುಂದಾಪುರ:ತಾಲೂಕಿನ ಮೂಲತಃ ಹಟ್ಟಿಯಂಗಡಿ ಗ್ರಾಮದ ಸಾಬ್ಲಾಡಿ ನಿವಾಸಿ ಪ್ರಸ್ತುತ ಹುಣ್ಸೆಮಕ್ಕಿಯಲ್ಲಿ ವಾಸಮಾಡುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರು ಉದ್ಯಮದ ಜತೆಗೆ ಹೈನುಗಾರಿಕೆಯಲ್ಲಿ ತೊಡಗಿ ಸುಮಾರು 60 ಕ್ಕೂ ಹೆಚ್ಚಿನ ಹಸುಗಳನ್ನು ಸಾಕಿ ಕೊಂಡು ದಿನವೊಂದಕ್ಕೆ ಅಂದಾಜು 300 ಲೀಟರ್ ಹಾಲು ಉತ್ಪಾದನೆಯನ್ನು ಮಾಡುತ್ತಿದ್ದಾರೆ.ಹೈನುಗಾರಿಕೆಯಲ್ಲಿ ತೊಡಗಿ ಕೊಂಡು ಹಸುಗಳ ಜೊತೆ ನೆಮ್ಮದಿ ಜೀವನವನ್ನು ಸಾಗಿಸುತ್ತಿರುವ ಸಬ್ಲಾಡಿ ಮಂಜಯ್ಯ ಶೆಟ್ಟಿ ಅವರಿಗೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳು ಒಲಿದು ಬಂದಿದೆ.ಅವರ ಧರ್ಮ ಪತ್ನಿ ವಸಂತಿ ಶೆಡ್ತಿ ಹಾಗೂ ಮಗಳಾದ ದೀಪ್ತಿ ಎನ್ […]

ಸರಕಾರಿ ಕಿರಿಯ ಪ್ರಾಥಮಿಕ ಹೊಸಬಾಳು ಶಾಲೆಯಲ್ಲಿ ರಜತ ಮಹೋತ್ಸವ ಕಾರ್ಯಕ್ರಮ ಸಂಭ್ರಮಾಚರಣೆ

ಕುಂದಾಪುರ:ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಹೊಸಬಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಬೆಳ್ಳಿ ಬೆಳಕು, ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಅದ್ಧೂರಿಯಾಗಿ ಬುಧವಾರ ನಡೆಯಿತು. ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ದೇವಸ್ಥಾನ ಕಮಲಶಿಲೆ ಅನುವಂಶಿಕ ಮೊಕ್ತೇಸರರಾದ ಎಸ್.ಸಚ್ಚಿದಾನಂದ ಚಾತ್ರ ಅವರು ಬೆಳ್ಳಿ ಬೆಳಕು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ದಾನ,ಧರ್ಮ ಮಾಡಿಕೊಂಡು ಉಪಕಾರ ಮನೋಭಾವದಿಂದ ಬಾಳ್ವೆ ಮಾಡಿದಾಗ ಮಾತ್ರ ನಮ್ಮ ಹೆಸರು ಸಮಾಜದಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಹೇಳಿದರು.ಶಾಲೆಯ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಕೈಲಾದಷ್ಟು ಸಹಾಯ ಮಾಡಲಾಗುವುದು […]

You cannot copy content of this page