ಗುಜ್ಜಾಡಿ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ವಿರೋಧಿಸಿ ದಿಢೀರ್ ಪ್ರತಿಭಟನೆ

ಕುಂದಾಪುರ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನ ನೆಪದಲ್ಲಿ ಕಾರ್ಮಿಕ ಇಲಾಖೆವೂ ಕಾರ್ಮಿಕರ ಕಲ್ಯಾಣ ನಿಧಿಯಿಂದ 600 ಕೋಟಿ ಹಣವನ್ನು ಬಿಡುಗಡೆ ಮಾಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ.ಕಟ್ಟಡ ಕಾರ್ಮಿಕರಿಗೆ ಪ್ರಯೋಜನೆ ಆಗದಿರುವಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿ ಹಣ ದುರ್ಬಳಕೆ ಮಾಡುತ್ತಿದೆ ಎಂದು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ ಕಲ್ಲೇಗಾರ ಆರೋಪಿಸಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರಕಾರ,ಕಾರ್ಮಿಕ ಇಲಾಖೆ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ,ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ

ಬ್ರಹ್ಮಾವರ:ವಿದ್ಯಾಲಕ್ಷೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಮಾತನಾಡಿ,ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ.ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಈ ಉಪನ್ಯಾಸ,ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು.ಈಶ ಫೌಂಡೇಶನ್ ಮಂಗಳೂರು ಶಿಕ್ಷಕ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು.ಇಶಾ ಫೌಂಡೇಶನ್‍ನ ಕಾರ್ಯಕರ್ತ ಸುಬ್ರಹ್ಮಣ್ಯ,ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ.ಸೀಮಾ ಜಿ ಭಟ್ ಹಾಗೂ ಸಂಸ್ಥೆಯ ಉಪನ್ಯಾಸಕರು,ಉಪನ್ಯಾಸಕೇತರರು,ವಿದ್ಯಾರ್ಥಿಗಳು […]

ಬೈಂದೂರು ತಾಲೂಕು ಸಮಾವೇಶ,ಮನೆ ಮನೆ ಮಂತ್ರಾಕ್ಷತಾ ಅಭಿಯಾನ

ಬೈಂದೂರು:ಅಯೋಧ್ಯೆ ರಾಮ ಮಂದಿರದಲ್ಲಿ ಪೂಜೆಗೊಂಡು ನಮ್ಮೂರಿಗೆ ಭವ್ಯ ಶೋಭಾ ಯಾತ್ರೆಯಲ್ಲಿ ಆಗಮಿಸಿದ ಮಂತ್ರಾಕ್ಷತೆಯನ್ನು ಮನೆ ಮನೆಗೆ ತಲುಪಿಸಿಸುವ ಕಾರ್ಯ ಮಾಡಬೇಕಾಗಿದೆ ಎಂದು ಅಯೋಧ್ಯೆ ಶ್ರೀರಾಮ ಮಂದಿರ ಅಭಿಯಾನದ ಉಡುಪಿ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹೇಳಿದರು.ಅಯೋಧ್ಯ ಶ್ರೀರಾಮ ಮಂದಿರ ಮಂತ್ರಾಕ್ಷತಾ ಅಭಿಯಾನ ಉಡುಪಿ ಜಿಲ್ಲೆ,ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಮೂರ್ತಿ ಪ್ರತಿಷ್ಠಾನ ಪ್ರಯುಕ್ತ ಮನೆ ಸಂಪರ್ಕ ಹಾಗೂ ಮಂತ್ರಾಕ್ಷತಾ ಅಭಿಯಾನ ಸಮಿತಿ ವತಿಯಿಂದ ಶ್ರೀಮಹಾಗಣಪತಿ ಮಾಂಗಲ್ಯ ಮಂಟಪ ನಾವುಂದದಲ್ಲಿ ಭಾನುವಾರ ನಡೆದ ಬೈಂದೂರು ತಾಲೂಕು ಸಮಾವೇಶವನ್ನು ಉದ್ದೇಶಿಸಿ […]

You cannot copy content of this page