ಮಂತ್ರಾಕ್ಷತೆಯ ಬೃಹತ್ ಮೆರವಣಿಗೆ

ಬೈಂದೂರು:ಅಯೋಧ್ಯೆಯಲ್ಲಿ ಶ್ರೀರಾಮಲಲ್ಲನಿಗೆ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ಹಾಗೂ ಮರವಂತೆ ಶ್ರೀರಾಮ ಮಂದಿರದಲ್ಲಿ ಪೂಜಿಸಿದ ಮಂತ್ರಾಕ್ಷತೆಯನ್ನು ಪೂರ್ಣ ಕುಂಭದೊಂದಿಗೆ ವಿವಿಧ ಭಜನಾ ತಂಡ,ಕುಣಿತ ಭಜನೆ,ಚಂಡೆ ವಾದನದೊಂದಿಗೆ ಮರವಂತೆ ಶ್ರೀರಾಮ ಮಂದಿರ ದಿಂದ ನಾವುಂದ ಮಾಂಗಲ್ಯ ಮಂಟಪದ ವರೆಗೆ ಭವ್ಯ ಮೆರವಣಿಗೆ ಭಾನುವಾರ ನಡೆಯಿತು.ಮೆರವಣಿಗೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ,ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.ರಾಮಕೃಷ್ಣ ಆಶ್ರಮ ಪರಮ ಪೂಜ್ಯ ಶ್ರೀ ಸತ್ಯ ಸ್ವರೂಪಾನಂದ ಸ್ವಾಮೀಜಿಗಳು ತಾಲೂಕಿನ ಎಲ್ಲಾ ಗ್ರಾಮಗಳಿಗೂ ಮಂತ್ರಾಕ್ಷತೆಯನ್ನು ವಿತರಿಸಿದರು.

ಹಕ್ಲಾಡಿ:ಅಕ್ಷರ ಮಂಟಪ,ದಿ.ಬಾಳೆಮನೆ ಭಾಸ್ಕರ ಶೆಟ್ಟಿ ರಂಗವೇದಿಕೆ ಲೋಕಾರ್ಪಣೆ

ಕುಂದಾಪುರ:ಬೈಂದೂರು ವಲಯದ ಹಕ್ಲಾಡಿ ಕೆ.ಎಸ್.ಎಸ್ ಕನ್ನಡ ಮತ್ತು ಆಂಗ್ಲ ಮಾಧ್ಯಮ ಸರಕಾರಿ ಪ್ರೌಢಶಾಲೆಯಲ್ಲಿ ದಿ.ಬಾಳೆಮನೆ ಭಾಸ್ಕರ ಶೆಟ್ಟಿ ರಂಗವೇದಿಕೆ ಲೋಕಾರ್ಪಣೆ,ಅಕ್ಷರ ಮಂಟಪ ಸಭಾಂಗಣ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಶನಿವಾರ ನಡೆಯಿತು. ಬೈಂದೂರು ಕ್ಷೇತ್ರದ ಮಾಜಿ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರು ಅಕ್ಷರ ಮಂಟಪ ಹಿರಿಯ ವಿದ್ಯಾರ್ಥಿ ಸಭಾಂಗಣ ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಸುಸಜ್ಜಿತವಾದ ಅಕ್ಷರ ಮಂಟಪ ನಿರ್ಮಾಣ ಮಾಡಿರುವುದು ಶ್ಲಾಘನೀಯ ಕೆಲಸವಾಗಿದೆ.ನಮ್ಮಲ್ಲಿ ಸಾಮಾಜಿಕ ಕಳಕಳಿ ಜಾಗ್ರತವಾದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲು […]

ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ,ಅಪಘಾತದಲ್ಲಿ ಐವರು ದುರ್ಮರಣ

ಕುಂದಾಪುರ:ಶಿರಸಿ ತಾಲೂಕಿನ ಬಂಡಲ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಮಂಗಳೂರಿನ ಒಂದೇ ಕುಟುಂಬದ ನಾಲ್ವರು ಸಹಿತ ಐವರು ಮೃತಪಟ್ಟಿದ್ದಾರೆ.ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಮಡುಗಟ್ಟಿದೆ. ಮಂಗಳೂರು ಕಿನ್ನಿಕಂಬಳ ಸಮೀಪದ ಕಂದಾವರದ ನಿವಾಸಿ ರಾಮಕೃಷ್ಣ ರಾವ್ (71), ಅವರ ಪತ್ನಿ ವಿದ್ಯಾಲಕ್ಷ್ಮೀ ರಾವ್ (67), ಪುಷ್ಪಾ ಮೋಹನ್ ರಾವ್ (62), ಸುಹಾಸ ರಾವ್ (30) ಹಾಗೂ ಕಾರು ಚಾಲಕ ಮೂಲತಃ ಸುರತ್ಕಲ್‌ನ, ಪ್ರಸ್ತುತ ಚೆನ್ನೈನಲ್ಲಿರುವ ಅರವಿಂದ (38) ಮೃತಪಟ್ಟವರು. ಶಿರಸಿಯ […]

You cannot copy content of this page