ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ:ಕ್ಲಾಟ್ ಪರೀಕ್ಷೆಯಲ್ಲಿ ಅನಘಾ ನಾಯಕ್ ಸಾಧನೆ

ಕುಂದಾಪುರ:ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಅನಘಾ ನಾಯಕ್ ಅವರು ಕೇಂದ್ರೀಕೃತ ರಾಷ್ಟ್ರೀಯ ಮಟ್ಟದ ಸರ್ಕಾರಿ ಪ್ರವೇಶ ಪರೀಕ್ಷೆಯಾದ ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (ಅಐಂಖಿ-2023) ಯಲ್ಲಿ ಅತ್ಯುತ್ತಮ ಸಾಧನೆ ಮಾಡುವುದರೊಂದಿಗೆ ರಾಜ್ಯ ಮಟ್ಟದಲ್ಲಿ 964ನೇ ರ್ಯಾಂಕ್ ಗಳಿಸುವುದರ ಮೂಲಕ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ.ಅನಘಾ ನಾಯಕ್ ಅವರು ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಪಾಠ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಾರೆ.ಈ ವಿದ್ಯಾ ಸಂಸ್ಥೆಯು,ವಿದ್ಯಾರ್ಥಿಗಳಿಗೆ ಅನೇಕ ಸ್ಪರ್ಧಾತಕ್ಮ ಪರೀಕ್ಷೆಗಳಿಗೆ […]

ಗುಜ್ಜಾಡಿ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ವಿರೋಧಿಸಿ ದಿಢೀರ್ ಪ್ರತಿಭಟನೆ

ಕುಂದಾಪುರ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಿನ ನೆಪದಲ್ಲಿ ಕಾರ್ಮಿಕ ಇಲಾಖೆವೂ ಕಾರ್ಮಿಕರ ಕಲ್ಯಾಣ ನಿಧಿಯಿಂದ 600 ಕೋಟಿ ಹಣವನ್ನು ಬಿಡುಗಡೆ ಮಾಡಿಕೊಂಡು ಖಾಸಗಿ ಆಸ್ಪತ್ರೆಗಳೊಂದಿಗೆ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಲು ಒಡಂಬಡಿಕೆ ಮಾಡಿಕೊಂಡಿದೆ.ಕಟ್ಟಡ ಕಾರ್ಮಿಕರಿಗೆ ಪ್ರಯೋಜನೆ ಆಗದಿರುವಂತಹ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿ ಹಣ ದುರ್ಬಳಕೆ ಮಾಡುತ್ತಿದೆ ಎಂದು ಕುಂದಾಪುರ ತಾಲೂಕು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಅಧ್ಯಕ್ಷ ಸುರೇಶ ಕಲ್ಲೇಗಾರ ಆರೋಪಿಸಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದಲ್ಲಿ ಮಂಗಳವಾರ ನಡೆದ ಕರ್ನಾಟಕ ಸರಕಾರ,ಕಾರ್ಮಿಕ ಇಲಾಖೆ […]

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ,ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ

ಬ್ರಹ್ಮಾವರ:ವಿದ್ಯಾಲಕ್ಷೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರದಲ್ಲಿ ಇಶಾ ಹಠ ಯೋಗ ಫೌಂಡೇಶನ್ ವತಿಯಿಂದ ಉಪನ್ಯಾಸ ಹಾಗೂ ತರಬೇತಿ ಕಾರ್ಯಾಗಾರ ನಡೆಯಿತು.ಕಾಲೇಜಿನ ಸಂಸ್ಥಾಪಕ ಸುಬ್ರಹ್ಮಣ್ಯ ಮಾತನಾಡಿ,ಉತ್ತಮ ಆರೋಗ್ಯಕ್ಕಾಗಿ ದಿನನಿತ್ಯದ ಜೀವನದಲ್ಲಿ ಯೋಗ ಒಂದು ಆರೋಗ್ಯ ಪೂರ್ಣವಾದ ಅಭ್ಯಾಸ ಮಾರ್ಗವಾಗಿದೆ.ವಿದ್ಯಾರ್ಥಿಗಳಿಗೆ ಉತ್ತಮ ಮನಸ್ಥಿತಿ ಹೊಂದುವ ಉದ್ದೇಶದಿಂದ ಕಾಲೇಜಿನಲ್ಲಿ ಈ ಉಪನ್ಯಾಸ,ತರಬೇತಿ ಆಯೋಜಿಸಲಾಗಿದೆ ಎಂದು ಹೇಳಿದರು.ಈಶ ಫೌಂಡೇಶನ್ ಮಂಗಳೂರು ಶಿಕ್ಷಕ ಪ್ರವೀಣ್ ಕುಮಾರ್ ಮಾಹಿತಿ ನೀಡಿದರು.ಇಶಾ ಫೌಂಡೇಶನ್‍ನ ಕಾರ್ಯಕರ್ತ ಸುಬ್ರಹ್ಮಣ್ಯ,ಕಾಲೇಜಿನ ನಿರ್ದೇಶಕಿ ಮಮತಾ,ಪ್ರಾಂಶುಪಾಲರಾದ ಡಾ.ಸೀಮಾ ಜಿ ಭಟ್ ಹಾಗೂ ಸಂಸ್ಥೆಯ ಉಪನ್ಯಾಸಕರು,ಉಪನ್ಯಾಸಕೇತರರು,ವಿದ್ಯಾರ್ಥಿಗಳು […]

You cannot copy content of this page