ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಬೈಂದೂರು:ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ನಾವುಂದ ಕಾಲೇಜಿನಲ್ಲಿ ಗುರುವಾರ ನಡೆಯಿತು.ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷ ನರಸಿಂಹ ದೇವಾಡಿಗ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉದ್ಯಮಿ ಮೊಹ್ಮದ್ ಇಕ್ಬಾಲ್ ಉದ್ಘಾಟಿಸಿದರು.ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ರಾಜು ಪೂಜಾರಿ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಶೆಟ್ಟಿ,ದೈ.ಶಿ.ಶಿ ಸಂಘದ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ,ಗ್ರೇಡ್ ಒನ್ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ,ಜಿಲ್ಲಾಧ್ಯಕ್ಷ ಸತ್ಯನಾರಾಯಣ ಎಸ್,ದೈ.ಶಿ ಉಪನ್ಯಾಸಕ ಸಂಘದ ಅಧ್ಯಕ್ಷ ಜೀವನ್ ಕುಮಾರ್ ಶೆಟ್ಟಿ,ಯುವಜನ […]

ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಬೈಂದೂರು:ಪಡುಕೋಣೆ ನಿವಾಸಿ ಪ್ರಶಾಂತ್ ಸುನಂದಾ ದಂಪತಿಗಳ ಪುತ್ರಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಸಿಂಧು (16) ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಗಂಗೊಳ್ಳಿ ಪೆÇಲೀಸ್ ಠಾಣೆ ವ್ಯಾಪ್ತಿಯ ಪಡುಕೋಣೆಯಲ್ಲಿ ಗುರುವಾರ ನಡೆದಿದೆ.ಕುಂದಾಪುರ ವಡೇರಹೋಬಳಿಯಲ್ಲಿರುವ ಬಾಲಕಿಯರ ವಸತಿ ನಿಲಯದಲ್ಲಿದ್ದು,ಸಮೀಪದ ಶಾಲೆಯೊಂದರಲ್ಲಿ ಸಿಂಧು 10ನೇ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದಾರೆ.ಕಳದೆರಡು ದಿನಗಳ ಹಿಂದೆ ಅನಾರೋಗ್ಯದ ಕಾರಣದಿಂದ ಸಿಂಧು ಮನೆಗೆ ತೆರಳಿದ್ದರು,ಬುಧವಾರ ಅವರ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.ಗುರುವಾರ ಶಾಲೆಗೆ ತೆರಳಬೇಕಿದ್ದ ಸಿಂಧು ಅವರು ಶಾಲೆಗೆ ತೆರಳದೆ ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಮೃತದೇಹವನ್ನು […]

ಗಂಗೊಳ್ಳಿ ಗ್ರಾಮ ಪಂಚಾಯತ್:ಗೃಹ ಲಕ್ಷ್ಮೀ ಕಾರ್ಯಕ್ರಮ ವೀಕ್ಷಣೆ

ಕುಂದಾಪುರ:ಗಂಗೊಳ್ಳಿ ಗ್ರಾಮ ಪಂಚಾಯತ್ ವತಿಯಿಂದ ಗೃಹ ಲಕ್ಷ್ಮೀ ಯೋಜನೆಯ ಲೈವ್ ವೀಕ್ಷಣೆ ಕಾರ್ಯಕ್ರಮ ಗಂಗೊಳ್ಳಿ ರಾಮ ಮಂದಿರದಲ್ಲಿ ನಡೆಯಿತು.ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಪಂಚಾಯತ್ ವತಿಯಿಂದ ಅರಿಶಿನ ಕುಂಕುಮ,ಹೂ ನೀಡಿ ಸ್ವಾಗತಿಸಿಕೊಳ್ಳಲಾಯಿತು.ನೂರಾರು ಫಲಾನುಭವಿಗಳು ಭಾಗವಹಿಸಿದ್ದರು.ಗಂಗೊಳ್ಳಿ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ್ ಖಾರ್ವಿ,ಉಪಾಧ್ಯಕ್ಷೆ ಪ್ರೇಮಾ ಸಿ ಪೂಜಾರಿ ಮತ್ತು ಸದಸ್ಯರು ಹಾಗೂ ಸಿಬ್ಬಂದಿಗಳು,ನೋಡಲ್ ಅಧಿಕಾರಿ ರಾಜುಕುಮಾರ್ ಉಪಸ್ಥಿತರಿದ್ದರು.ಗಂಗೊಳ್ಳಿ ಗ್ರಾಮ ಪಂಚಾಯತ್ ಒಂದರಲ್ಲೆ ಸುಮಾರು 3500 ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಗೆ ಹೆಸರನ್ನು ನೋಂದಾವಣೆ ಮಾಡಿಕೊಂಡಿದ್ದಾರೆ.

You cannot copy content of this page