ಕಂಚುಗೋಡು ಶಾಲೆ ಹಳೆ ವಿದ್ಯಾರ್ಥಿ ಸಂಘಕ್ಕೆ ಪ್ರಶಸ್ತಿ
ಕುಂದಾಪುರ:ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ಬೈಂದೂರು ತಾಲೂಕು ವತಿಯಿಂದ ಬೈಂದೂರುನಲ್ಲಿ ಸೋಮವಾರ ನಡೆದ ಸಾಧಕ ಎಸ್ಡಿಎಂಸಿ ಅಧ್ಯಕ್ಷರು ಹಾಗೂ ಸಾಧಕ ಹಳೆವಿದ್ಯಾರ್ಥಿಗಳಿಗೆ ಸನ್ಮಾನ ಮತ್ತು ಸದಸ್ಯರಿಗೆ ಸಾಮಥ್ರ್ಯವರ್ಧನಾ ತರಬೇತಿ ಕಾರ್ಯಕ್ರಮದಲ್ಲಿ ಅತ್ಯುತ್ತಮ ಕೆಲಸದೊಂದಿಗೆ ಗುರುತಿಸಿಕೊಂಡಿರುವ ಹೊಸಾಡು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘಕ್ಕೆ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.ಕಂಚುಗೋಡು ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಸಂಘದ ಅಧ್ಯಕ್ಷ ಚೌಕಿ ಅಶೋಕ ಖಾರ್ವಿ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ […]