ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ:ದಿತಿಜ ಚಂದನ್‍ಗೆ ಚಿನ್ನ,ಬೆಳ್ಳಿ ಪದಕ

ಕುಂದಾಪುರ:ಕೊಬುಡೋ ಬುಡೋಕನ್ ಕರಾಟೆ ಡೋ ಅಸೋಸಿಯೇಷನ್ ಕರ್ನಾಟಕ (ಕರಾಟೆ ಬುಡೋಕನ್ ಇಂಟರ್ ನ್ಯಾಶನಲ್ ಶಾಖಾ ಕೇಂದ್ರ ಆಸ್ಟ್ರೇಲಿಯಾ) ಅವರ ಆಯೋಜನೆಯಲ್ಲಿ ಹಿರಿಯಡ್ಕ ಶ್ರೀ ವೀರಭದ್ರ ಸಭಾಂಗಣದಲ್ಲಿ ನಡೆದ 6ನೇ ರಾಷ್ಟ್ರ ಮಟ್ಟದ ಆಹ್ವಾನಿತ ತಂಡಗಳ ಕರಾಟೆ ಸ್ಪರ್ಧಾಕೂಟದಲ್ಲಿ ದಿತಿಜ.ವಿ ಚಂದನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸಿ ಚಿನ್ನದ ಪದಕ ಹಾಗೂ ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನಗಳಿಸಿ ಬೆಳ್ಳಿ ಪದಕ ಜಯಿಸಿದ್ದಾರೆ.ಗೋಪಾಲ ಚಂದನ್ ಮತ್ತು ಶ್ಯಾಮಲ ಜಿ ಚಂದನ್ ದಂಪತಿಗಳ ಪುತ್ರರಾಗಿದ್ದಾರೆ,ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 8ನೇ […]

ಶಿಕ್ಷಕ ಸಂತೋಷ್ ಖಾರ್ವಿಗೆ ಬೀಳ್ಕೊಡುಗೆ

ಕುಂದಾಪುರ:ಬೈಂದೂರು ವಲಯದ ಸರಕಾರಿ ಹಿರಿಯ ಪ್ರಾಥಮಿಕ ಹೊಸಾಡು ಶಾಲೆಯಲ್ಲಿ ಸುದೀರ್ಘ ಹತ್ತು ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆಗೊಂಡಿರುವ ಶಿಕ್ಷಕ ಸಂತೋಷ್.ಎನ್ ಖಾರ್ವಿ ಅವರನ್ನು ಶಾಲೆಯ ಎಸ್.ಡಿ.ಎಂ.ಸಿ ಮತ್ತು ಶಿಕ್ಷಕವೃಂದವರಿಂದ ಹೊಸಾಡು ಶಾಲೆಯಲ್ಲಿ ಶುಕ್ರವಾರ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ರೇಖಾ ಅಧ್ಯಕ್ಷತೆ ಅಧ್ಯಕ್ಷತೆ ವಹಿಸಿದ್ದರು,ಉಪಾಧ್ಯಕ್ಷ ಹುಸೇನಪ್ಪ,ನಿವೃತ್ತ ಶಿಕ್ಷಕರಾದ ಸದಾಶಿವ ಶೆಟ್ಟಿ ಮತ್ತು ತೇಜಪ್ಪ ಶೆಟ್ಟಿ,ಅಧ್ಯಾಪಕಿ ನಿರ್ಮಲ ಉಪಸ್ಥಿತರಿದ್ದರು.ಶಾಲಾ ಮುಖ್ಯ ಶಿಕ್ಷಕ ರಾಜೇಶ್ ಪಡುಕೋಣೆ ಸ್ವಾಗತಿಸಿದರು.ಸಹ ಶಿಕ್ಷಕರಾದ […]

ಮರವಂತೆ:ಡಿವೈಡರ್ ಏರಿದ ಬಸ್,ವಿದ್ಯುತ್ ಕಂಬಕ್ಕೆ ಡಿಕ್ಕಿ

ಕುಂದಾಪುರ:ಕೇರಳದಿಂದ ದಾಂಡೇಲಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಟೂರಿಸ್ಟ್ ಬಸ್ ಬೈಂದೂರು ತಾಲೂಕಿನ ಮರವಂತೆ ಕೇಶವ ಬೊಬ್ಬರ್ಯ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ ಬೆಳಗಿನ ಜಾವಾ 5.30 ರ ಸುಮಾರಿಗೆ ನಿಯಂತ್ರಣ ಕಳೆದು ಕೊಂಡು ಡಿವೈಡರ್ ಮಧ್ಯ ಇರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.ಎರಡು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು,ಬಸ್ಸಿನ ಮುಂಭಾಗ ಜಖಂ ಗೊಂಡಿದೆ.ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಅಪಘಾತದ ರಭಸಕ್ಕೆ ಬುಡ ಸಮೇತ ಕಿತ್ತು ಬಂದಿದ್ದ ವಿದ್ಯುತ್ ಕಂಬ ಬಸ್ಸಿನ ಮುಂಭಾಗದಲ್ಲಿ ಸಿಲುಕಿ ಕೊಂಡಿತ್ತು.

You cannot copy content of this page