ಶ್ರೀಪದ್ಮಾವತಿ ದೇವಿ ಕೃಪಾಪೋಷಿತ ಯಕ್ಷಗಾನ ಮಂಡಳಿ,ಶ್ರೀಕ್ಷೇತ್ರ ಬೋಳಂಬಳ್ಳಿ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ದ ಕಾಲ್ತೋಡು ಬೋಳಂಬಳ್ಳಿ ಶ್ರೀಪದ್ಮಾವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀಧರ್ಮರಾಜ ಜೈನ್ ಬೋಳಂಬಳ್ಳಿ ಅವರ ನೇತೃತ್ವದಲ್ಲಿ ಶ್ರೀ ಪದ್ಮಾವತಿ ದೇವಿ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಬೋಳಂಬಳ್ಳಿ ವತಿಯಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.ಪ್ರದರ್ಶನಗೊಳ್ಳುವ ಪ್ರಸಂಗಗಳು-ಕಾವ್ಯ ತರಂಗಿಣಿ,ಕುಲದೈವ ಪಂಜುರ್ಲಿ,ಉಮಲೀಲೆ,ಭರಣಿ ನಕ್ಷತ್ರ,ಜೀವನ ಯಾತ್ರೆ ಸೇರಿದಂತೆ ಇನ್ನಿತರ ಜನಪ್ರಿಯ ಪ್ರಸಂಗಗಳು ಮೇಳದ ವತಿಯಿಂದ ಪ್ರದರ್ಶನಗೊಳ್ಳಲಿದೆ.ಕಲಾಭಿಮಾನಿಗಳು ಶ್ರೀಬೋಳಂಬಳ್ಳಿ ಮೇಳವನ್ನು ಪ್ರೋತ್ಸಾಹಿಸಬೇಕೆಂದು ಕ್ಷೇತ್ರದ ಧರ್ಮದರ್ಶಿಗಳಾದ ಧರ್ಮರಾಜ ಜೈನ್ ಕೇಳಿಕೊಂಡಿದ್ದಾರೆ

ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ, ಜನತಾ ಕಾಲೇಜಿನ ಪ್ರಜ್ವಲ್ ಪಿ.ಶೆಟ್ಟಿಗೆ ಬೆಳ್ಳಿ

ಕುಂದಾಪುರ:ವಿ.ಕೆ.ಬುಡಕಾನ್ ಸೆಲ್ಫ್ ಡಿಫೆನ್ಸ್ ಮತ್ತು ಕರಾಟೆ ಅಶೋಶಿಯನ್ ಒಪ್ ಇಂಡಿಯಾ ಅವರ ಆಯೋಜನೆಯ,ಮಂದಾರ್ತಿ ಟ್ರೋಫಿ-2023 ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್ ಶಿಪ್ ನಲ್ಲಿ,ಕುಮಟೆ ವಿಭಾಗದಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ಪಿ.ಶೆಟ್ಟಿ ಬೆಳ್ಳಿಯ ಪದಕವನ್ನು ಜಯಿಸಿದ್ದಾರೆ.ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರುಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ:ಜನತಾ ಕಾಲೇಜಿನ ಕಮಲ್ ಕಿಶೋರ್‌ ಸಾಧನೆ

ಹೆಮ್ಮಾಡಿ:ಕುಂದಾಪುರ ಭಂಡಾರ್ಕಾರ್ಸ್ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ನಡೆದ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ,ಕನ್ನಡ ಚಲನಚಿತ್ರ ಗಾಯನ ವಿಭಾಗದಲ್ಲಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಮಲ್ ಕಿಶೋರ್ ತೃತೀಯ ಸ್ಥಾನವನ್ನು ಪಡೆದಿದ್ದಾರೆ.ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

You cannot copy content of this page