ಹಿರಿಯ ಭಜಕ ಕೃಷ್ಣ ಮೊಗವೀರರಿಗೆ ಸನ್ಮಾನ

ಕುಂದಾಪುರ:ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಿರಿಯ ಭಜಕರಾದ ಕೃಷ್ಣ ಮೊಗವೀರ ಅರಾಟೆ ಅವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ಅಧ್ಯಕ್ಷ ಸುರೇಶ ಪೂಜಾರಿ,ತಾಲೂಕು ಭಜನಾ ಮಂಡಳಿಗಳ ಒಕ್ಕೂಟ ಅಧ್ಯಕ್ಷ ನಿತಿನ್ ವಿಠಲವಾಡಿ,ವಂಡ್ಸೆ ವಲಯಾಧ್ಯಕ್ಷ ಸಂತೋಷ ಪೂಜಾರಿ,ಎಂ.ಎಂ ಸುವರ್ಣ,ರಮೇಶ್ ಆಚಾರ್ಯ,ಸುಮತಿ,ರಘುರಾಮ ಶೆಟ್ಟಿ,ಶಂಕರ ಶೆಟ್ಟಿ,ರಾಮ ಪೂಜಾರಿ ಹಾಗೂ ಭಜನಾ ಮಂಡಳಿ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

ಹೆಮ್ಮಾಡಿ ಜನತಾ ಕಾಲೇಜಿನಲ್ಲಿ,ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ

ಕುಂದಾಪುರ:ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಒಂದಲ್ಲ ಒಂದು ರೀತಿಯ ಪ್ರತಿಭೆ ಅಡಗಿರುತ್ತದೆ ಸೂಕ್ತವಾದ ವೇದಿಕೆಯನ್ನು ಕಲ್ಪಿಸಿಕೊಟ್ಟಾಗ ಮಾತ್ರ ಅವರೊಳಗೆ ಅಡಗಿರುವ ಪ್ರತಿಭೆ ಹೊರ ಹೊಮ್ಮಲು ಸಾಧ್ಯವಿದೆ.ಶೈಕ್ಷಣಿಕ ಚಟುವಟಿಕೆ ಜತೆಗೆ ಸಾಂಸ್ಕ್ರತಿಕ,ಕಲೆಗೆ ಒತ್ತನ್ನು ನೀಡುವುದರಿಂದ ಒತ್ತಡ ರಹಿತವಾಗಿ ಶಿಕ್ಷಣವನ್ನು ಪಡೆಯಲು ಸಹಕಾರಿ ಆಗುತ್ತದೆ ಎಂದು ಆರ್.ಜೆ ನಯನಾ ಅಭಿಪ್ರಾಯಪಟ್ಟರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜನತಾ ಚಿತ್ತಾರ-ಪ್ರತಿಭಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅದ್ಯಕ್ಷರಾದ,ಪ್ರಿನ್ಸಿಪಾಲ್ ಗಣೇಶ ಮೊಗವೀರ ಕಾರ್ಯಕ್ರಮದ […]

ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ

ಕುಂದಾಪುರ:ಶ್ರದ್ಧಾ ಭಕ್ತಿಯಿಂದ ಆಚರಣೆಗೊಳ್ಳುವ ಭಜನೆಗೆ ಶತ ಶತಮಾನದ ಇತಿಹಾಸವಿದೆ ಬಾಲ್ಯಾವಸ್ಥೆಯಲ್ಲಿ ಮಕ್ಕಳಿಗೆ ಭಜನೆ ಕಲಿಸುವುದರಿಂದ ಭಾಷೆಯ ಉಚ್ಚಾರದ ಜತೆಗೆ ಜ್ಞಾಪಕ ಶಕ್ತಿ ಕೂಡ ವೃದ್ಧಿಯಾಗುತ್ತದೆ.ಡಿಜಿಟಲ್ ಯುಗದಲ್ಲಿ ಭಜನೆಯನ್ನು ಉಳಿಸುವ ಕೆಲಸ ಆಗಬೇಕು ಎಂದು ಎಂ.ಎಂ ಸುವರ್ಣ ಅರಾಟೆ ಹೇಳಿದರು.ತಾಲೂಕು ಭಜನಾ ಮಂಡಳಿ ಒಕ್ಕೂಟ ಕುಂದಾಪುರ ಹಾಗೂ ವಂಡ್ಸೆ ವಲಯ ಒಕ್ಕೂಟ ಸಹಯೋಗದೊಂದಿಗೆ ಶ್ರೀರಾಮ ಭಜನಾ ಮಂಡಳಿ ಅರಾಟೆ-ಹೊಸಾಡು ವತಿಯಿಂದ ಅರಾಟೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆದ ಮಕ್ಕಳ ಕುಣಿತಾ ಭಜನೆ ಪಾದಾರ್ಪಣೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು […]

You cannot copy content of this page