ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ

ಬೈಂದೂರು:ಜಾನುವಾರು ಬಂಜೆತನ ಹಾಗೂ ಬ್ರಹತ್ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ರೇಬಿಸ್ ಲಸಿಕಾ ಕಾರ್ಯಕ್ರಮ ಬಿಜೂರು ಪಂಚಾಯತ್ ವ್ಯಾಪ್ತಿಯಲ್ಲಿ ಭಾನುವಾರ ನಡೆಯಿತು.ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ‌ ಅವರು ಶಿಬಿರಕ್ಕೆ ಚಾಲನೆಯನ್ನು ನೀಡಿದರು.ಬಿಜೂರು ಪಂಚಾಯತ್ ಉಪಾಧ್ಯಕ್ಷ ರಂಜಿತ್, ಸದಸ್ಯರಾದ ವೀರೇಂದ್ರ ಶೆಟ್ಟಿ, ನಾಗರಾಜ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.ನಾಯಿಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು.ಲವಣ ಮಿಶ್ರಿತ ಆಹಾರದ ಪೊಟ್ಟಣ ವಿತರಿಸಲಾಯಿತು.ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾಗರಾಜ,ಡಾ.ರೆಡ್ಡಪ್ಪ ಎಂ.ಸಿ ಉಪನಿರ್ದೇಶಕರು (ಆಡಳಿತ) ರವರ ಮಾರ್ಗರ್ಶನದಲ್ಲಿ ಆರೋಗ್ಯ ತಪಾಸಣಾ ಶಿಬಿರ […]

ಚೈತನ್ಯ ವಿಮಾಯೋಜನೆ ಚೆಕ್ ವಿತರಣೆ

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನವೋದಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಯೋಜನೆ ಚೆಕ್ ಮತ್ತು ಅಪಘಾತ ವಿಮೆ ಯೋಜನೆ ಚೆಕ್‍ನ್ನು ವಿತರಿಸಲಾಯಿತು.ಈ ಸಂದರ್ಭ ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್,ನವೋದಯ ಚಾರಿಟೇಬಲ್ ಟ್ರಸ್ಟ್‍ನ ಸಿ.ಇ.ಒ ಪೂರ್ಣಿಮಾ,ಮರವಂತೆ ಬಡಾಕೆರೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮತ್ತು ಅತಿಥಿಗಳು ಉಪಸ್ಥಿತರಿದ್ದರು.

ಬೃಹತ್ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

ಕುಂದಾಪುರ:ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮಂಗಳೂರು,ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಾವುಂದ ಮತ್ತು ಆದರ್ಶ ಆಸ್ಪತ್ರೆ ಉಡುಪಿ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಹಿರಿಯ ಪ್ರಾಥಮಿಕ ನಾವುಂದ ಶಾಲೆಯಲ್ಲಿ ಭಾನುವಾರ ನಡೆಯಿತು.ಸವಿರಾರು ಜನರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವೈದ್ಯಕೀಯ ತಪಾಸಣೆಯನ್ನು ಮಾಡಿಸಿಕೊಂಡರು.25ಕ್ಕೂ ಅಧಿಕ ನುರಿತ ವೈದ್ಯರು ಆರೋಗ್ಯ ತಪಾಸಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸಹಾಯಕ ಕಮಿಷನರ್ ರಶ್ಮೀ ಎಸ್.ಆರ್ ವೈದ್ಯಕೀಯ ತಪಾಸಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ನಮ್ಮ ಜೀವನ ಶೈಲಿಯಲ್ಲಿ […]

You cannot copy content of this page