ನವೆಂಬರ್ 29.ರಂದು ಹಕ್ಲಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 121ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ

ಕುಂದಾಪುರ:ಬೈಂದೂರು ವಲಯದ ಹಕ್ಲಾಡಿಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 121ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ ಕಾರ್ಯಕ್ರಮ ನವೆಂಬರ್ 29 ರಂದು ಬುಧವಾರ ಶಾಲೆಯ ವಠಾರದಲ್ಲಿ ನಡೆಯಲಿದೆ ‌.ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಪ್ರಯುಕ್ತ ಬುಧವಾರ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ.ಹಕ್ಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರೇಮಾ ದೇವಾಡಿಗ ಧ್ವಜಾರೋಹಣ ನೆರವೇರಿಸಲಿದ್ದಾರೆ.ಶಾಲಾಎಸ್ ಡಿ ಎಂ ಸಿ ಅಧ್ಯಕ್ಷ ಅಯೂಬ್ ಮಾಣಿಕೋಳಲು ಅಧ್ಯಕ್ಷತೆ ವಹಿಸಲಿದ್ದಾರೆ.ಹಕ್ಲಾಡಿ ಪಂಚಾಯತ್ ಉಪಾಧ್ಯಕ್ಷ ಸುಭಾಷ್ ಶೆಟ್ಟಿ ಹೊಳ್ಮಗೆ ಸೇರಿದಂತೆ,ಅತಿಥಿ ಗಣ್ಯರು ಭಾಗವಹಿಸಲಿದ್ದಾರೆ.ಸಂಜೆ 7 ಕ್ಕೆ […]

ಕೃಷಿ -ತೋಟಗಾರಿಕೆ,ಅರಣ್ಯ ಕಾನೂನು ಮಾಹಿತಿ ಶಿಬಿರ ಉದ್ಘಾಟನೆ

ಕುಂದಾಪುರ:ಕುಂದಬಾರಂದಾಡಿ ತೆಂಗು ಉತ್ಪಾದಕರ ಸೌಹಾರ್ದ ಸೊಸೈಟಿ,ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಅವರ ಸಂಯುಕ್ತ ಆಶ್ರಯದಲ್ಲಿ ಕೃಷಿ ತೋಟಗಾರಿಕೆ ಮಾಹಿತಿ ಶಿಬಿರ ಹಾಗೂ ಅರಣ್ಯ ಕಾನೂನು ಮಾಹಿತಿ ಕಾರ್ಯಕ್ರಮ ಕುಂದಬಾರಂದಾಡಿ ಮೂಡಾರೆ ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶನಿವಾರ ನಡೆಯಿತು. ಉಡುಪಿ ಜಿಲ್ಲೆಯ ಭಾರತೀಯ ಕಿಸಾನ್ ಸಂಘದ ಪ್ರಧಾನ ಕಾರ್ಯದರ್ಶಿ ಸತ್ಯನಾರಾಯಣ ಉಡುಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ಗ್ರಾಮೀಣ ಭಾಗದಲ್ಲಿ ನಡೆಯುವ ಇಂತಹ ಕಾರ್ಯಕ್ರಮಗಳು ರೈತರಿಗೆ ಬಹಳಷ್ಟು ಉಪಯೋಗವಾಗಲಿದೆ.ರೈತರು ಒಂದೇ ಬೆಳೆಗೆ ಮಾರು ಹೋಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು […]

ಹೊಸಾಡು ಶಾಲೆಯಲ್ಲಿ,ನ.26 ರಂದು ರಕ್ತದಾನ ಶಿಬಿರ

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಗಂಗಾ ರೈತರ ಸೇವಾ ಸಹಕಾರಿ ಬ್ಯಾಂಕ್ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ನ.26 ರಂದು ಭಾನುವಾರ ಬೆಳಿಗ್ಗೆ 9 ರಿಂದ 1 ಗಂಟೆ ತನಕ ಹೊಸಾಡು ಶಾಲೆಯಲ್ಲಿ […]

You cannot copy content of this page