ಸುಳ್ಳು ಸುದ್ದಿ ಪತ್ತೆ-ನಿಯಂತ್ರಣ-ಕಠಿಣ ಶಿಕ್ಷೆಗೆ ತುರ್ತು ಕ್ರಮ :ಮುಖ್ಯ ಮಂತ್ರಿ ಸಿದ್ದರಾಮಯ್ಯ

ಬೆಂಗಳೂರು:ಪ್ರಜಾಪ್ರಭುತ್ವಕ್ಕೆ ಬೆದರಿಕೆ ಹಾಗೂ ಸಮಾಜದ ದ್ರುವೀಕರಣಕ್ಕೆ ಸುಳ್ಳು ಸುದ್ದಿಗಳು ಕಾರಣವಾಗಿದ್ದು, ಇದರ ನಿಯಂತ್ರಣ ಅತ್ಯಗತ್ಯ ಎಂದು ಅಭಿಪ್ರಾಯಪಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಫ್ಯಾಕ್ಟ್ ಚೆಕ್ ಘಟಕ ಸ್ಥಾಪನೆ ಸೇರಿದಂತೆ ಅಗತ್ಯ ಇರುವ ಎಲ್ಲಾ ನಿಯಮ ಮತ್ತು ಕಾನೂನು ರೂಪಿಸುವ ಪ್ರಯತ್ನಕ್ಕೆ ಗ್ರೀನ್ ಸಿಗ್ನಲ್ ನೀಡಿದರು.ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸೈಬರ್ ಸುರಕ್ಷತೆಗೆ ಸಂಬಂಧಿಸಿದಂತೆ ಸಭೆಯಲ್ಲಿ ಅವರು ಈ ತೀರ್ಮಾನ ಮಾಡಿದರು.ಸುಳ್ಳು ಸುದ್ದಿಗಳ ಮತ್ತು ಸುಳ್ಳು ಸುದ್ದಿ ಸೃಷ್ಟಿಸುವ ಸಿಂಡಿಕೇಟ್ ಗಳ ಪತ್ತೆ,ಸುಳ್ಳು ಸುದ್ದಿ […]

ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಬೈಂದೂರಿನಲ್ಲಿ ಹಿಂಜಾವೇ ಪ್ರತಿಭಟನೆ

ಬೈಂದೂರು:ಹಿಂದು ಜಾಗರಣ ವೇದಿಕೆ ಪ್ರಾಂತ ಸಹ ಸಂಚಾಲಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ, ಬಂಧಿಸಿರುದ್ದನ್ನು ಖಂಡಿಸಿ ಬೈಂದೂರು ತಾಲೂಕು ಹಿಂದೂ ಜಾಗರಣ ವೇದಿಕೆ ವತಿಯಿಂದ ಬೈಂದೂರು ಅಂಡರ್ ಪಾಸ್ ಬಳಿ ಪ್ರತಿಭಟನೆ ಮಂಗಳವಾರ ನಡೆಯಿತು. ಬೈಂದೂರು ತಾಲೂಕು ಸಹ ಸಂಚಾಲಕ ಹರೀಶ್ ಸೇಳ್ಕೋಡ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ,ಇಂದಿನ ಕಾಂಗ್ರೆಸ್ ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಹಿಂದೂ ಸಂಘಟನೆಗಳ ನಾಯಕರ ಮೇಲೆ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿ ಹಿಂದೂ ಸಂಘಟನೆಗಳ ಸಾಮಾಜಿಕ ಚಳವಳಿಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದು […]

ವಿಚಾರಣೆಗೆ ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಮಹಿಳೆ

ಕುಂದಾಪುರ:ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆಂದು ಹೋದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆಯೊಬ್ಬರು ಹಲ್ಲೆ ನಡೆಸಲು ಯತ್ನಿಸಿದ ಘಟನೆ ಕೋಟೇಶ್ವರದಲ್ಲಿ ಮಂಗಳವಾರ ನಡೆದಿದೆ.ಸಾರ್ವಜನಿಕರಿಗೆ ಸಮಸ್ಯೆಯಾಗುವ ರೀತಿಯಲ್ಲಿ ರಸ್ತೆಯ ಮೇಲೆ ವ್ಯವಹಾರ ನಡೆಸುತ್ತಿದ್ದಾರೆ ಎಂದು ಸ್ಥಳೀಯ ವಾಹನ ಸವಾರರ ದೂರಿನ ಮೇರೆಗೆ ಸ್ಥಳಕ್ಕೆ ವಿಚಾರಣೆಗೆ ಬಂದ ಪೊಲೀಸರ ಮೇಲೆ ಫ್ಯಾನ್ಸಿ ಸ್ಟೋರ್ ನಡೆಸುತ್ತಿದ್ದ ಮಹಿಳೆ ಸೀಮೆ ಎಣ್ಣೆ ಸುರಿದು ಬೆಂಕಿ ಸೂಡಿ ಯಿಂದ ಹಲ್ಲೆಗೆ ಯತ್ನಿಸಿದ್ದಾರೆ.ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

You cannot copy content of this page