ಕಾರ್ ಡಿಕ್ಕಿ:ಬೈಕ್ ಸವಾರ ಸಾವು

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಹಾಬಲ ಅವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಮಹಾಬಲ ಅವರು ಬೈಕ್‍ನಲ್ಲಿ ಹೆಮ್ಮಾಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ತೋಪ್ಲು ಸಂಪರ್ಕ ರಸ್ತೆಗೆ ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರಕ್ಕೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಡಸ್ಟರ್ ಕಾರು ಡಿಕ್ಕಿ ಹೊಡೆತ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ನಿವೃತ್ತ ಶಿಕ್ಷಕಿ ಜೂಲಿಯಟ್ ಒಲಿಂಪಿಯಾ ಲಾಜರಸ್‍ಗೆ ಬೀಳ್ಕೊಡುಗೆ

ಕುಂದಾಪುರ:ತಾಲೂಕಿನ ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 30 ವರ್ಷಗಳಿಂದ ಸುದೀರ್ಘವಾಗಿ ದೈಹಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ನಿವೃತ್ತ ಶಿಕ್ಷಕಿ ಜೂಲಿಯಟ್ ಒಲಿಂಪಿಯಾ ಲಾಜರಸ್ ಅವರನ್ನು ಹೆಮ್ಮಾಡಿ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘ ಹಾಗೂ ಶಾಲಾ ವತಿಯಿಂದ ಸನ್ಮಾನಿಸಲಾಯಿತು.ಈ ಸಂಧರ್ಭ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು,ಅತಿಥಿಗಳು ಉಪಸ್ಥಿತರಿದ್ದರು.

ಹೆಮ್ಮಾಡಿ ಶಾಲೆ ವಾರ್ಷಿಕೋತ್ಸವ ಕಾರ್ಯಕ್ರಮ

ಕುಂದಾಪುರ:ಹಳ್ಳಿ ಜನರು ಶಿಕ್ಷಣಕ್ಕೆ ಒತ್ತು ನೀಡಿದ್ದರಿಂದಲೇ ದೇಶ ಅಭಿವೃದ್ದಿ ಪಥದತ್ತ ಸಾಗಲು ಸಹಕಾರಿ ಆಗಿದೆ.ಶಿಕ್ಷಣದಿಂದ ಬಡತನವನ್ನು ಹೊಗಲಾಡಿಸ ಬಹುದೆಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಬೈಂದೂರು ವಲಯದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಮ್ಮಾಡಿ ಶಾಲೆಯಲ್ಲಿ ಗುರುವಾರ ನಡೆದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮಾತನಾಡಿ,ವಿದ್ಯಾಭ್ಯಾಸದ ಜತೆಗೆ ಮಕ್ಕಳಿಗೆ ಸಂಸ್ಕಾರಯುತವಾದ ಶಿಕ್ಷಣವನ್ನು ನೀಡುವಲ್ಲಿ ಪೋಷಕರು ಹೆಚ್ಚಿನ ಗಮನವನ್ನು ಹರಿಸಬೇಕಾಗಿದೆ.ಮಕ್ಕಳ ಭವಿಷ್ಯವನ್ನು ನಿರೂಪಿಸುವಲ್ಲಿ ಶಿಕ್ಷಕರ ಪಾತ್ರದ […]

You cannot copy content of this page