ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ

ಹೆಮ್ಮಾಡಿ:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು,ಯು.ಬಿ.ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ ಬೈಂದೂರು ಅವರ ಸಂಯುಕ್ತ ಆಶ್ರಯದಲ್ಲಿ ನಡೆದ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅದ್ಭುತವಾದ ಸಾಧನೆಯನ್ನು ಮಾಡಿದ್ದಾರೆ.ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಲಕಾ ಹೆಬ್ಬಾರ್ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಇಂಪಾ ಪ್ರಥಮ ಸ್ಥಾನ […]

ಜನತಾ ಹೆಮ್ಮಾಡಿ:ಕೌಶಲ್ ಆಚಾರ್ಯ ರಾಷ್ಟ್ರೀಯ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ

ಜನತಾ ಹೆಮ್ಮಾಡಿ:ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ವತಿಯಿಂದ ನವದೆಹಲಿಯಲ್ಲಿ ನ.15 ರಂದು ನಡೆಯಲಿರುವ ಪ್ರಥಮ ಹೊರನಾಡು ಮಕ್ಕಳ ಸಾಹಿತ್ಯ ಸಮ್ಮೇಳದ ಕವಿಗೋಷ್ಠಿ ವಿಭಾಗಕ್ಕೆ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವೀಭಾಗದ ವಿದ್ಯಾರ್ಥಿ ಕೌಶಲ್ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ.ಉಡುಪಿ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ವಿದ್ಯಾರ್ಥಿ.ಸಾಧಕ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಿನ್ಸಿಪಾಲ್,ಬೋಧಕ,ಬೊಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬಗೆ ಸನ್ಮಾನ

ಹೆಮ್ಮಾಡಿ:ಕಿತ್ತಳೆ ಹಣ್ಣನ್ನು ಮಾರಿ ಸರಕಾರಿ ಶಾಲೆಯನ್ನು ಕಟ್ಟಿಸಿದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹರೇಕಳ ಹಾಜಬ್ಬ ಅವರನ್ನು ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ನಡೆದ ಜನತಾ ಆವಿಷ್ಕಾರ್ 2K23 ಉದ್ಘಾಟನಾ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಕಾಲೇಜಿನ ಅಧ್ಯಕ್ಷರಾದ ಪ್ರಿನ್ಸಿಪಾಲ್ ಗಣೇಶ ಮೊಗವೀರ,ಮಾಧವ ಪೂಜಾರಿ,ಚಿತ್ರಾ ಕಾರಂತ,ಹರ್ಷವರ್ಧನ ಶೆಟ್ಟಿ,ತಿಮ್ಮಪ್ಪ ಮೊಗವೀರ,ಉದಯ ಕುಮಾರ್ ಹಟ್ಟಿಯಂಗಡಿ, ಕಾಲೇಜಿನ ವೈಸ್ ಪ್ರಿನ್ಸಿಪಾಲ್ ರಮೇಶ ಪೂಜಾರಿ ಉಪಸ್ಥಿತರಿದ್ದರು.

You cannot copy content of this page