ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ

ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು. ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ […]

ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಾವುಂದದಲ್ಲಿ ನಡೆಯಲಿದೆ

ಕುಂದಾಪುರ:ನವೋದಯ ಗ್ರಾಮವಿಕಾಸ ಚಾರಿಟೆಬಲ್ ಟ್ರಸ್ಟ್ ಮಂಗಳೂರು, ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ಆಶ್ರಯದಲ್ಲಿ,ಉಡುಪಿ ಆದರ್ಶ ಆಸ್ಪತ್ರೆ ಸಹಯೋಗದಲ್ಲಿ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಡಿ.3ರಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರ ನಡೆಯಲಿದೆ. ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಸ್.ರಾಜು ಪೂಜಾರಿ ಮಾತನಾಡಿ,ಶಿಬಿರಕ್ಕೆವೈದ್ಯಕೀಯ ತಜ್ಞ ಡಾ.ಜಿ.ಎಸ್‌.ಚಂದ್ರಶೇಖರ, ನರರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ.ಎ.ರಾಜಾ ಸೇರಿದಂತೆ 25ಕ್ಕೂ ಹೆಚ್ಚು ತಜ್ಞ ವೈದ್ಯರು ಭಾಗವಹಿಸಲಿದ್ದಾರೆ ಆರೋಗ್ಯ ಶಿಬಿರದ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು […]

ವೈಷ್ಣವಿ ಖಾರ್ವಿಗೆ ಕಂಚಿನ ಪದಕ

ಕುಂದಾಪುರ:ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಯಕುಪ್ಪೆಡ್ ಬೆಂಜ್ ಪ್ರೆಸ್ ಸ್ಪರ್ಧೆಯ 69 ಕೆ.ಜಿ ವಿಭಾಗದಲ್ಲಿ ವೈಷ್ಣವಿ ಖಾರ್ವಿ ಗಂಗೊಳ್ಳಿ ಕಂಚಿನ ಪದಕ ಜಯಿಸಿದ್ದಾರೆ.ಅವರು ಕುಂದಾಪುರ ನ್ಯೂ ಹಕ್ರ್ಯುಲೆಸ್ ಜಿಮ್ ಹಾಗೂ ಕಿಂಗ್ ಫಿಷರ್ ಸ್ಪೋಟ್ರ್ಸ್ ಕ್ಲಬ್ ಸದಸ್ಯೆ.

You cannot copy content of this page