ಉಪ್ಪುಂದ:ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ರಥೋತ್ಸವ
ಕುಂದಾಪುರ:ಬೈಂದೂರು ತಾಲೂಕಿನ ಉಪ್ಪುಂದದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ಮಂಗಳವಾರ ನಡೆಯಿತು.ಸಾವಿರಾರು ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪ್ರಸಾದ ಸ್ವೀಕರಿಸಿದರು. ಕೋಟೇಶ್ವರದ ’ಕೊಡಿ’ ಹಬ್ಬದ ಮಾರನೇಯ ದಿನದಂದು ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕೊಡಿ ಹಬ್ಬ ನಡೆಯುತ್ತದೆ.ಬೈಂದೂರು ಹಾಗೂ ಉಪ್ಪುಂದ ಭಾಗದ ಜನರು ’ಉಪ್ಪುಂದದ ಕೊಡಿ ಹಬ್ಬ’ ಎಂದು ಕರೆಯುವ ಸಂಪ್ರದಾಯವಿದೆ.ಹೊಸ ಮದುಮಕ್ಕಳು ಹಾಗೂ ಸಂತಾನ ಭಾಗ್ಯಕ್ಕಾಗಿ ಹರಕೆ ಹೊತ್ತುಕೊಳ್ಳುವವರು ಹಬ್ಬದ ದಿನದಂದು ಶ್ರೀ ದೇವಿಯ ದರ್ಶನ ಮಾಡಿ […]























































































































































































































































































































































































































































































































































































































































































































































































































































































































































































































































































































































































































































































































































































































































































