ಮುಳುಗುಜ್ಞ ದಿನೇಶ ಖಾರ್ವಿಗೆ ಸನ್ಮಾನ

ಕಾರವಾರ:ಮುದಗ ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ವತಿಯಿಂದ ಸಮಾಜ ಸೇವಕ ಮುಳುಗುತಜ್ಞ ದಿನೇಶ ಖಾರ್ವಿ ಗಂಗೊಳ್ಳಿ ಅವರನ್ನು ಕಾರವಾರದ ಸಂಘದ ಕಛೇರಿಯಲ್ಲಿ ಶುಕ್ರವಾರ ಸನ್ಮಾನಿಸಲಾಯಿತು.ನಿರಾಶ್ರಿತರ ಹಾಗೂ ಸ್ಥಳೀಯ ಬೋಟ್ ಮಾಲೀಕರ ಸಂಘದ ಅಧ್ಯಕ್ಷ ಯಶ್ವಂತ ಖಾರ್ವಿ,ಉಪಾಧ್ಯಕ್ಷ ದಾಮೋದರ ಜಂಗಾ ತಾಂಡೇಲ,ದೇವದಾಸ ದುರ್ಗೇಕರ್,ಗಣೇಶ ಸಿ.ಕೆ,ಶ್ರೀಕಾಂತ ಪಾಟ ತಾಂಡೇಲ, ಅಶೋಕ ಹರಿಕಾಂತ,ಗಿರಿಧರ ಈರಾ ತಾಂಡೇಲ,ಮಾರುತಿ ನಾರಾಯಣ ಹರಿಕಾಂತ,ಜಯವಂತ ನಾರಾಯಣ ಹರಿಕಾಂತ,ಮಹಾಬಲೇಶ್ವರ ರಾಮ ಹರಿಕಾಂತ ಮುದಗ ಆಮದಳ್ಳಿ,ಜಗದೀಶ ಉಪಸ್ಥಿತರಿದ್ದರು.

ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘಕ್ಕೆ ಪ್ರಶಸ್ತಿ

ಕುಂದಾಪುರ:2022-23ನೇ ಸಾಲಿನಲ್ಲಿ ಸಹಕಾರ ಕ್ಷೇತ್ರದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿ ಸಾಧಿಸಿದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘವನ್ನು ಗುರುತಿಸಿ ಗೌರವಿಸಲಾಯಿತು.ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಪರವಾಗಿ ಅಧ್ಯಕ್ಷ ಸದಾಶಿವ ಖಾರ್ವಿ ಮತ್ತು ಉಪಾಧ್ಯಕ್ಷ ಸೂರಜ್ ಖಾರ್ವಿ ಅವರನ್ನು ಸನ್ಮಾನಿಸಿ ಪ್ರಶಸ್ತಿ ಪತ್ರ ನೀಡಿದರು.ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ […]

ನೂಜಾಡಿ: ನೇತ್ರ ತಪಾಸಣೆ,ಶಸ್ತ್ರ ಚಿಕಿತ್ಸಾ ಶಿಬಿರ

ನೂಜಾಡಿ:ಜಿಲ್ಲಾ ಪಂಚಾಯತ್ ಉಡುಪಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಉಡುಪಿ ಜಿಲ್ಲಾ ಅಂಧತ್ವ ನಿವಾರಣ ವಿಭಾಗ,ಪ್ರಾಥಮಿಕ ಆರೋಗ್ಯ ಕೇಂದ್ರ ಹಕ್ಲಾಡಿ,ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೂಜಾಡಿ,ಗ್ರಾಮ ಪಂಚಾಯತ್ ಹಕ್ಲಾಡಿ,ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಅವರ ಸಂಯುಕ್ತ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ನೂಜಾಡಿ ಕುಪ್ಪಯ್ಯ ಶೆಟ್ಟಿ ಸಭಾಭವನದಲ್ಲಿ ಗುರುವಾರ ನಡೆಯಿತು.ಹಕ್ಲಾಡಿ ಗ್ರಾ.ಪಂ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು,ಕಸ್ತೂರ್ಬಾ ಆಸ್ಪತ್ರೆ ಡಾ.ಆಶ್ರೀತ್ ಕಾಮತ್,ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ […]

You cannot copy content of this page