ವಿವೇಕ ಕೊಠಡಿ ಉದ್ಘಾಟನೆ,ಚಿಣ್ಣರ ಕಲರವ ಕಾರ್ಯಕ್ರಮ

ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ […]

ಅಪಾಯದ ಸ್ಥಿತಿಯಲ್ಲಿದ್ದ ಹಸು ರಕ್ಷಣೆ

ಬೈಂದೂರು:ಬಿಜೂರು ರೈಲ್ವೆ ಬ್ರಿಡ್ಜ್ ಕೆಳಗೆ ಫಿಲ್ಲರ್ ಮೇಲೆ ಹಸು ಇರುವ ದೃಶ್ಯ ಸಾರ್ವಜನಿಕರ ಗಮನಕ್ಕೆ ಬಂದಿದೆ.ರೈಲಿನ ವೇಗಕ್ಕೆ ಆಯತಪ್ಪಿ ಬ್ರಿಜ್ ಪಿಲ್ಲರ್ ಕೆಳಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು.ಸಾರ್ವಜನಿಕರು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನೆಡೆಸಿ ಕೆಲವು ಗಂಟೆಗಳ ನಂತರ ಧನವನ್ನು ಮೇಲೆತ್ತುದರ ಮೂಲಕ ರಕ್ಷಣೆ ಮಾಡಲಾಯಿತುಬಿ.ಬ್ರಿಡ್ಜಾ ಫಿಲ್ಲರ್ ಮೇಲೆ ಹಸು ನಿಂತು ಕೊಂಡಿರುವುದು ಅಚ್ಚರಿ ಘಟನೆಗೆ ಸಾಕ್ಷಿಯಾಗಿದೆ.ರಕ್ಷಣಾ ಕಾರ್ಯಾಚರಣೆಯಲ್ಲಿ ಬೈಂದೂರು ಅಗ್ನಿಶಾಮಕ ದಳ ಸಿಬ್ಬಂದಿಗಳು,ಸಮಾಜ ಸೇವ ಸುಬ್ರಹ್ಮಣ್ಯ, ಸ್ಥಳೀಯರು ಭಾಗವಹಿಸಿದ್ದರು.

ಹೆಮ್ಮಾಡಿ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಅಣುಕು ಯುವ ಸಂಸತ್ ಸ್ಪರ್ಧೆ

ಹೆಮ್ಮಾಡಿ:ಸಂಸದೀಯ ವ್ಯವಹಾರಗಳ ಇಲಾಖೆ,ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ ವಿಭಾಗ) ಹಾಗೂ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು ಹೆಮ್ಮಾಡಿ ಅದರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ವಿಭಾಗದ ಅಣುಕು ಯುವ ಸಂಸತ್ ಸ್ಪರ್ಧೆ ನಡೆಯಿತು. ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಾರುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,ವಿದ್ಯಾರ್ಥಿಗಳು ದೇಶದ ಸಂಪತ್ತಾಗಿದ್ದಾರೆ.ದೇಶ ಅಭಿವೃದ್ಧಿ ಪಥದತ್ತ ಸಾಗಲು ಯುವಕರ ಕೊಡುಗೆ ಅಪಾರ ವಾದದ,ವಿದ್ಯಾರ್ಜನೆ ಜತೆಯಲ್ಲಿ ಕೌಶಲ್ಯ ವರ್ಧಿತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ ಎಂದರು.ಅಣುಕು […]

You cannot copy content of this page