ಹೊಸಾಡು ಶಾಲೆಯಲ್ಲಿ,ನ.26 ರಂದು ರಕ್ತದಾನ ಶಿಬಿರ

ಕುಂದಾಪುರ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ,ರೋಟರಿ ಕ್ಲಬ್ ಗಂಗೊಳ್ಳಿ,ಇಂಡಿಯನ್ ರೆಡ್‍ಕ್ರಾಸ್ ಕುಂದಾಪುರ,ಉಡುಪಿ ಜಿಲ್ಲಾ ಅಂಧತ್ವ ನಿವಾರಣಾ ವಿಭಾಗ ಉಡುಪಿ ಜಿಲ್ಲೆ,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಪಂಚಗಂಗಾ ರೈತರ ಸೇವಾ ಸಹಕಾರಿ ಬ್ಯಾಂಕ್ ಹೆಮ್ಮಾಡಿ,ಗ್ರಾಮ ಪಂಚಾಯತ್ ಹೊಸಾಡು,ಪಾರ್ವತಿ ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು ಮುದ್ದುಮನೆ ಅವರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ನೇತ್ರ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರ ನ.26 ರಂದು ಭಾನುವಾರ ಬೆಳಿಗ್ಗೆ 9 ರಿಂದ 1 ಗಂಟೆ ತನಕ ಹೊಸಾಡು ಶಾಲೆಯಲ್ಲಿ […]

ಸುರೇಂದ್ರ ನಾಡ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆ

ಕುಂದಾಪುರ:ಶಾಲೆಯಿಂದ ಹೊರಗುಳಿದ ಮತ್ತು ಶಾಲೆ ಬಿಟ್ಟು ದುಡಿಯುತ್ತಿರುವ ಮಕ್ಕಳನ್ನು ಸಮೀಕ್ಷೆ ನಡೆಸಿ ಅವರನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡುವುದರ ಮುಖೇನ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವ.ರಾಷ್ಟ್ರ ಮತ್ತು ರಾಜ್ಯ ಮಟ್ಟದ ಶೈಕ್ಷಣಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡಿರುವ ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ನಿವಾಸಿ ಸುರೇಂದ್ರ ನಾಡ ಗುಡ್ಡೆಹೋಟೆಲ್ ಅವರು ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಯಾಗಿ ಆಯ್ಕೆಯಾಗಿದ್ದಾರೆ.ಅವರು ಪ್ರಸ್ತುತ ಶ್ರೀ ಸಿದ್ದಲಿಂಗೇಶ್ವರ ಕನ್ನಡ ಪ್ರೌಢ ಶಾಲೆ ಮಾಗಡಿ ರಸ್ತೆ ಬೆಂಗಳೂರು (ದಕ್ಷಿಣ ವಲಯ-02 ರಲ್ಲಿ) ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ಜಿಲ್ಲಾ ಮಟ್ಟದ ಅಂತರ್ ಕಾಲೇಜು ಸಾಂಸ್ಕೃತಿಕ,ಸಾಹಿತ್ಯಕ ಸ್ಪರ್ಧೆಯಲ್ಲಿ ಸಾಧನೆ ಮೆರೆದ ಹೆಮ್ಮಾಡಿ ಜನತಾ ಕಾಲೇಜಿನ ವಿದ್ಯಾರ್ಥಿಗಳು

ಹೆಮ್ಮಾಡಿ:ಕುಂದಾಪುರ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ಉಗಮ’ ಪದವಿ ಪೂರ್ವ ವಿಭಾಗದ ಜಿಲ್ಲಾ ಮಟ್ಟದ ಸಾಂಸ್ಕೃತಿಕ, ಸಾಹಿತ್ಯಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಕೇದಾರ್ ಮರವಂತೆ ದ್ವಿತೀಯ ಸ್ಥಾನ,ಪೋಟೋ ಕ್ಯಾಪ್ಚರ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅಮರನಾಥ್ ದ್ವಿತೀಯ ಸ್ಥಾನ,ಹ್ಯಾಸ್ಟ್ಯಾಗ್ ಸ್ಪರ್ಧೆಯಲ್ಲಿ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ಅನಘಾ ಪ್ರಥಮ ಸ್ಥಾನ,ಸಾಮೂಹಿಕ ಫಿಲ್ಮಿ ಡ್ಯಾನ್ಸ್ ಸ್ಪರ್ಧೆಯಲ್ಲಿ ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಪಿ.ಯು.ಸಿ […]

You cannot copy content of this page