ಮೃತಪಟ್ಟ ಸ್ಥಿತಿಯಲ್ಲಿ ಚಿರತೆ ಶವ ಪತ್ತೆ

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ತಾರಿಬೇರು ಎಂಬಲ್ಲಿ ಸುಮಾರು ಒಂದುವರೆ ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿದೆ.ಚಿರತೆ ಹೊಟ್ಟೆ ಮತ್ತು ಕುತ್ತಿಗೆ ಭಾಗದಲ್ಲಿ ಗಂಭೀರ ಸ್ವರೂಪದ ಗಾಯವಾಗಿದ್ದು.ಕೊಳೆತು ಹುಳ ಆಗಿದೆ.ಚಿರತೆಗಳ ನಡುವೆ ನಡೆದ ಕಾದಾಟದಲ್ಲಿ ಗಾಯವಾಗಿರಬಹುದೆಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.ಶವ ಪರೀಕ್ಷೆಗೆ ಒಳಪಡಿಸಿದ ಬಳಿಕ ಚಿರತೆ ಕಳೆಬರವನ್ನು ವಂಡ್ಸೆ ಡಿಪೆÇೀದಲ್ಲಿ ಸುಡಲಾಯಿತು.ಡಿಆರ್‍ಎಫ್‍ಒ ಸೆಲ್ವ ಮುರುಗನ್,ಫಾರೆಸ್ಟ್ ಆಫೀಸರ್ ಮಂಜುನಾಥ್ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಮುಳ್ಳಿಕಟ್ಟೆಯಲ್ಲಿ ಲಾರಿ ಪಲ್ಟಿ:ಚಾಲಕನಿಗೆ ಗಾಯ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮುಳ್ಳಿಕಟ್ಟೆ ಸರ್ಕಲ್ ಸಮೀಪ ಅರಾಟೆಗೆ ಸಂಪರ್ಕ ಕಲ್ಪಿಸುವ ಸರ್ವಿಸ್ ರಸ್ತೆ ಮೇಲೆ ಉರುಳಿ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ.ಚಾಲಕ ಮತ್ತು ಕ್ಲಿನರ್ ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕ ಅತಿಯಾದ ಮದ್ಯವನ್ನು ಸೇವಿಸಿದ್ದರ ಪರಿಣಾಮ ರಸ್ತೆಯನ್ನು ಗುರುತಿಸಲು ಸಾಧ್ಯವಾಗದೆ.ರಸ್ತೆ ಅಂಚಿನ ಮೇಲೆ ಲಾರಿ ಚಲಾಯಿಸಿದ್ದು.ನಿಯಂತ್ರಣ ಕಳೆದುಕೊಂಡ ಲಾರಿ ಮಗುಚಿ ಸರ್ವಿಸ್ ರಸ್ತೆ ಮೇಲೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಅಭಿಪ್ರಾಯ […]

ಏಕಪವಿತ್ರ ನಾಗಮಂಡಲೋತ್ಸವ ಸಂಪನ್ನ

ಕುಂದಾಪುರ:ಆದಿ ಸುಬ್ರಹ್ಮಣ್ಯ ದೇವಸ್ಥಾನ ವಂಡಾರು ಇದರ ವಾರ್ಷಿಕೋತ್ಸವ ಅಂಗವಾಗಿ ಶ್ರೀ ದೇವರಿಗೆ ಬ್ರಹ್ಮಕಲಶಾಭಿಷೇಕ ಸಹಿತವಂಡಾರು ಬಾಯರಿ ಕುಟುಂಬಸ್ಥರಿಂದ ಏಕಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶುಕ್ರವಾರ ವಂಡಾರುನಲ್ಲಿ ವಿಜೃಂಭಣೆಯಿಂದ ನಡೆಯಿತು. ನಾಗಮಂಡಲೋತ್ಸವ ಕಾರ್ಯಕ್ರಮದ ಅಂಗವಾಗಿ ಹಾಲಿಟ್ಟು ಸೇವೆ, ಸಾರ್ವಜನಿಕ ಮಹಾ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.ಸಾವಿರಾರು ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಶ್ರೀ ಆದಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದವನ್ನು ಸ್ವೀಕರಿಸಿದರು.ಶೃಂಗೇರಿ ಶಾರದಾ ಪೀಠದ ದಕ್ಷಿಣ ಪ್ರಾಂತೀಯ ಧರ್ಮಾಧಿಕಾರಿ ವೇದ ಮೂರ್ತಿ ನಾಗಪಾತ್ರಿಗಳಾದ ಲೋಕೇಶ್ ಅಡಿಗ ಬಡಾಕೆರೆ […]

You cannot copy content of this page