ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ದೀಪಾವಳಿ ಹಬ್ಬ ಸಂಪ್ರದಾಯದಂತೆ ಆಚರಣೆ,ಸಂಭ್ರಮದಿಂದ ಸಂಭ್ರಮಿಸಿದ ವಿದ್ಯಾರ್ಥಿಗಳು

ಕುಂದಾಪುರ:ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು,ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ, ಹಾಗೂ ಲಿಟ್ಲ್ ಸ್ಟಾರ್ ಆಂಗ್ಲ ಮಾಧ್ಯಮ ಶಾಲೆ,ಯಡಾಡಿ-ಮತ್ಯಾಡಿ ಇದರ ಸಹಯೋಗದಲ್ಲಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ದೀಪಾವಳಿಯ ಸಾಂಪ್ರದಾಯಿಕ ಆಚರಣೆಗಳಾದ ಗೋಪೂಜೆ,ಬಲೀಂದ್ರ ಕೂಗುವುದು,ತುಳಸಿ ಪೂಜೆ,ಕೃಷಿ ಪರಿಕರ ಮತ್ತು ಸರಸ್ವತಿ ಪೂಜೆಯನ್ನು ಕಾಲೇಜಿನ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು.ಕುಂದಕನ್ನಡದ ರಾಯಬಾರಿ,ಗ್ರಾವಿಟಿ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಮನು ಹಂದಾಡಿಯವರು ವಿದ್ಯಾರ್ಥಿಗಳಿಗೆ ದೀಪಾವಳಿ ಸಂದೇಶವನ್ನು ನೀಡುತ್ತಾ ಮಾತನಾಡಿ,ವಿದ್ಯಾರ್ಥಿಗಳಲ್ಲಿ ಭಾರತೀಯ ಸಂಸ್ಕøತಿ,ಪರಂಪರೆ ಬಗ್ಗೆ ಕಾಳಜಿ ಮತ್ತು ತಿಳುವಳಿಕೆ ಕಡಿಮೆಯಾಗುತ್ತಿದ್ದು ಎಕ್ಸಲೆಂಟ್ […]

ಮೀನುಗಾರರಿಗೆ ಪರಿಹಾರ ನೀಡುವಂತೆ ಸಂಸದ ಬಿ.ವೈ.ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ

ಕುಂದಾಪುರ:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಮತ್ತು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಮುಖ್ಯಮಂತ್ರಿ ಸಿದ್ದರಾಮ್ಯನವರನ್ನು ಬೆಂಗಳೂರಿನಲ್ಲಿ ಬುಧವಾರ ಭೇಟಿಮಾಡಿ ಕುಂದಾಪುರ ತಾಲೂಕಿನ ಗಂಗೊಳ್ಳಿ ವಾರ್ಪ್ ಬಂದರಿನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಸಂಕಷ್ಟಕ್ಕೆ ಈಡಾಗಿದ್ದ ಮೀನುಗಾರರಿಗೆ ಪರಿಹಾರ ನೀಡುವಂತೆ ಮನವಿಯನ್ನು ಸಲ್ಲಿಸಿದರು.ಈ ಸಂದರ್ಭ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಂಸದ ಬಿ.ವೈ.ರಾಘವೇಂದ್ರ ಅವರು ಮುಖ್ಯಮಂತ್ರಿಗಳಿಗೆ ಮನವಿಯನ್ನು ಸಲ್ಲಿಸಿ ಬಳಿಕ ಮಾತನಾಡಿ,ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಸಂಭವಿಸಿದ […]

ನಂಚಾರು ಕಾಮಧೇನು ಗೋಶಾಲೆಯಲ್ಲಿ ಗೋಪೂಜೆ ಆಚರಣೆ

ಕುಂದಾಪುರ:ಕಾಮಧೇನು ಗೋಶಾಲಾ ಮಹಾಸಂಘ ನಂಚಾರುನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು.ಕಂಬದಕೋಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಹಾಗೂ ಆರ್.ಕೆ ಸಂಜೀವರಾವ್ ಸ್ಮಾರಕ ದತ್ತು ಯೋಜನೆ ಕಂಬದಕೋಣೆ ಕೆ.ಎಸ್.ಪ್ರಮೋದ್ ರಾವ್ (ಪ್ರಮೋದಣ್ಣ) ಅವರು ಗೋವುಗಳಿಗೆ ಆರತಿ ಬೆಳಗಿ ಪೂಜೆ ಮಾಡುವುದರ ಮುಖೇನ ಗೋಪೂಜೆಯನ್ನು ನೆರವೇರಿಸಿದರು.ಈ ಸಂದರ್ಭ ಪ್ರಿನ್ಸಿಪಾಲ್ ವಿಶ್ವನಾಥ ಕರಬ ನಂಚಾರು,ಉದ್ಯಮಿಗಳಾದ ಟಿ.ಬಾಬು,ಪ್ರವೀಣ ಶೆಟ್ಟಿ ಮಂದಾರ್ತಿ,ಜಯಪ್ರಕಾಶ ಶೆಟ್ಟಿ ಗೋಳಿಯಂಗಡಿ,ಚಂದ್ರಶೇಖರ ಶೆಟ್ಟಿ ನಂಚಾರು,ಸತೀಶ್ ಪೂಜಾರಿ ನಂಚಾರು ಮತ್ತು ರಾಜೇಂದ್ರ ಚಕ್ಕೇರ ಮನೆಯವರು,ತಂತ್ರಾಡಿ ವಿಶ್ವನಾಥ ಬಾಯರಿ ಉಪಸ್ಥಿತರಿದ್ದರು.

You cannot copy content of this page